ರಾಜ್ಯ

ನಾನೇ ಯಜಮಾನಿ, ನಾನೇ ಗೃಹಲಕ್ಷ್ಮಿ..; ಗೃಹಲಕ್ಷ್ಮಿ ಯೋಜನೆಯ ಸಂಭ್ರಮ

ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ನಾರಿಯರ ಜೋಶ್ ಹೆಚ್ಚಿಸಿದೆ. ಗೃಹಲಕ್ಷ್ಮಿ ಯೋಜನೆಯ ಸಂಭ್ರಮ ರಾಜ್ಯದ ವಿವಿಧೆಡೆ ಹಬ್ಬದ ವಾತಾವರಣವನ್ನೇ ತಂದಿದೆ. ಗೃಹಲಕ್ಷ್ಮಿ ಸ್ಕೀಮ್‌ಗೆ ಚಾಲನೆ ನೀಡುವ ಮುಂಚೆಯೇ ಗೃಹಲಕ್ಷ್ಮಿ ಯೋಜನೆಗೆ ಮಹಿಳಾ ಮಣಿಯರು ಕಲರ್‌ಫುಲ್ ಸ್ವಾಗತ ಕೋರಿದ್ದಾರೆ. ರಂಗೋಲಿಯಲ್ಲಿ ನಾನೇ ಯಜಮಾನಿ, ನಾನೇ ಗೃಹಲಕ್ಷ್ಮಿ ಅಂತಾ ಚಿತ್ತಾರ ಮೂಡಿಸಿದ್ದು ಗಮನ ಸೆಳೆದಿದೆ.

ಗೃಹಲಕ್ಷ್ಮಿ ಯೋಜನೆ ಪ್ರತಿ ಮನೆಯ ಯಜಮಾನಿಗೂ ಎರಡು ಸಾವಿರ ನೀಡುವ ಗುರಿಯನ್ನು ಹೊಂದಿದೆ. ಸರ್ಕಾರದ ಈ ಸೌಲಭ್ಯಕ್ಕಾಗಿ ನಾರಿಯರು ವಿಭಿನ್ನವಾಗಿ ಸ್ವಾಗತ ಕೋರಿದ್ದಾರೆ. ಮನೆಗೆ ಧನಲಕ್ಷ್ಮಿ ಬರುತ್ತಿದ್ದಾಳೆ ಎನ್ನುವ ರೀತಿಯಲ್ಲಿ ರಂಗೋಲಿ ಹಾಕುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ದೊಡ್ಡಗುಬ್ಬಿಯಲ್ಲಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಿನ್ನೆಲೆ ರಂಗೋಲಿ ಬಿಡಿಸಿ ಸಂಭ್ರಮ ಆಚರಿಸಿದ್ದಾರೆ. ಸುಂದರ ರಂಗೋಲಿಯಲ್ಲಿ ನಾನೇ ಯಜಮಾನಿ, ನಾನೇ ಗೃಹಲಕ್ಷ್ಮಿ ಅಂತಾ ಬರೆದಿದ್ದು ತಮ್ಮ ಸಂತೋಷವನ್ನು ಹೊರ ಹಾಕುತ್ತಿದ್ದಾರೆ. ರಂಗೋಲಿಯ ಬಳಿ ಫೋಟೋ ತೆಗೆಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬೆಂಗಳೂರು ಟೌನ್ ಹಾಲ್ ಬಳಿ ಗೃಹಲಕ್ಷ್ಮಿ ಕಾರ್ಯಕ್ರಮ ಕಳೆ ಕಟ್ಟಿತ್ತು. ಬಿಬಿಎಂಪಿ ಸಿಬ್ಬಂದಿ ಮಹಿಳಾ ಮಣಿಯರಿಗೆ ಗುಲಾಬಿ ಕೊಟ್ಟು ಬರಮಾಡಿಕೊಂಡಿದ್ದಾರೆ. ಟೌನ್ ಹಾಲ್ ಮುಂಭಾಗದಲ್ಲಿ ಸುಂದರವಾಗಿ ರಂಗೋಲಿ ಇಟ್ಟು ಸಂಭ್ರಮ ಆಚರಿಸಿದ್ದಾರೆ.

ಮೈಸೂರಲ್ಲಿ ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡುತ್ತಿದ್ದು ಇದಕ್ಕಾಗಿ ಬೃಹತ್ ಸಮಾವೇಶವನ್ನೇ ಆಯೋಜಿಸಿದೆ. ಈ ಸಮಾವೇಶಕ್ಕೂ ಮುನ್ನ ಮಹಿಳಾಮಣಿಯರು ಕುಣಿದು ಕುಪ್ಪಳಿಸಿ ತಮ್ಮ ಸಂಭ್ರಮವನ್ನು ವ್ಯಕ್ತಪಡಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…

11 hours ago

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…

11 hours ago

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…

11 hours ago

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…

11 hours ago

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…

11 hours ago

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…

11 hours ago