ನಾನು ಇಸ್ರೋ ವಿಜ್ಞಾನಿ, ಚಂದ್ರಯಾನ-3ರ ಲ್ಯಾಂಡರ್ ವಿನ್ಯಾಸ ಮಾಡಿದ್ದು ನಾನೇ ಅಂತಾ ಸುಳ್ಳು ಹೇಳ್ಕೊಂಡು ಸಂದರ್ಶನ ಕೊಡ್ತಿದ್ದ 40 ವರ್ಷದ ವ್ಯಕ್ತಿಯನ್ನು ಗುಜರಾತ್ನ ಸೂರತ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಈ ಆರೋಪಕ್ಕೆ ಸಂಬಂಧಿಸಿದಂತೆ ಮೆಹುಲ್ ತ್ರಿವೇದಿ ಎಂಬಾತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇಸ್ರೋದ ಪುರಾತನ ವಿಜ್ಞಾನ ಅಪ್ಲಿಕೇಶನ್ ಇಲಾಖೆಯಲ್ಲಿ ಸಹಾಯಕ ಮುಖ್ಯಸ್ಥರಾಗಿರುವುದಾಗಿ ನಕಲಿ ನೇಮಕಾತಿ ಪತ್ರವನ್ನೂ ಈತ ಹೊಂದಿದ್ದ. ನನ್ನ ಟ್ಯೂಷನ್ ತರಗತಿಯನ್ನು ಜನಪ್ರಿಯಗೊಳಿಸಲು ಪ್ರಚಾರಕ್ಕಾಗಿ ವಿಜ್ಞಾನಿ ಅಂತಾ ಸುಳ್ಳು ಹೇಳಿದ್ದಾಗಿ ಪೊಲೀಸರ ಮುಂದೆ ತ್ರಿವೇದಿ ಬಾಯ್ಬಿಟ್ಟಿದ್ದಾನೆ.
ಅಂದ್ಹಾಗೆ ಭಾರತದ ಚಂದ್ರಯಾನ-3 ಜುಲೈ 14 ರಂದು ಉಡಾವಣೆಗೊಂಡಿತ್ತು. ಅದು ಆಗಸ್ಟ್ 23 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆಗಿದೆ. ಸಾಫ್ಟ್ ಲ್ಯಾಂಡ್ ಬೆನ್ನಲ್ಲೇ, ಇಸ್ರೋ ವಿಜ್ಞಾನಿಗಳು ಚಂದ್ರನ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಮಾಡಿದ ಏಕೈಕ ದೇಶ ಭಾರತವಾಗಿದ್ದು, ಇಡೀ ವಿಶ್ವವೇ ಕೊಂಡಾಡುತ್ತಿದೆ. ವಿಜ್ಞಾನಿಗಳ ಈ ಶ್ರಮದ ಕ್ರೆಡಿಟ್ ತೆಗೆದುಕೊಳ್ಳಲು ಹೊರಟಿದ್ದ ಆರೋಪಿ ಕೊನೆಗೂ ಲಾಕ್ ಆಗಿದ್ದಾನೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…