ನಾನು ಇಸ್ರೋ ವಿಜ್ಞಾನಿ, ಚಂದ್ರಯಾನ-3ರ ಲ್ಯಾಂಡರ್ ವಿನ್ಯಾಸ ಮಾಡಿದ್ದು ನಾನೇ ಅಂತಾ ಸುಳ್ಳು ಹೇಳ್ಕೊಂಡು ಸಂದರ್ಶನ ಕೊಡ್ತಿದ್ದ 40 ವರ್ಷದ ವ್ಯಕ್ತಿಯನ್ನು ಗುಜರಾತ್ನ ಸೂರತ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಈ ಆರೋಪಕ್ಕೆ ಸಂಬಂಧಿಸಿದಂತೆ ಮೆಹುಲ್ ತ್ರಿವೇದಿ ಎಂಬಾತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇಸ್ರೋದ ಪುರಾತನ ವಿಜ್ಞಾನ ಅಪ್ಲಿಕೇಶನ್ ಇಲಾಖೆಯಲ್ಲಿ ಸಹಾಯಕ ಮುಖ್ಯಸ್ಥರಾಗಿರುವುದಾಗಿ ನಕಲಿ ನೇಮಕಾತಿ ಪತ್ರವನ್ನೂ ಈತ ಹೊಂದಿದ್ದ. ನನ್ನ ಟ್ಯೂಷನ್ ತರಗತಿಯನ್ನು ಜನಪ್ರಿಯಗೊಳಿಸಲು ಪ್ರಚಾರಕ್ಕಾಗಿ ವಿಜ್ಞಾನಿ ಅಂತಾ ಸುಳ್ಳು ಹೇಳಿದ್ದಾಗಿ ಪೊಲೀಸರ ಮುಂದೆ ತ್ರಿವೇದಿ ಬಾಯ್ಬಿಟ್ಟಿದ್ದಾನೆ.
ಅಂದ್ಹಾಗೆ ಭಾರತದ ಚಂದ್ರಯಾನ-3 ಜುಲೈ 14 ರಂದು ಉಡಾವಣೆಗೊಂಡಿತ್ತು. ಅದು ಆಗಸ್ಟ್ 23 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆಗಿದೆ. ಸಾಫ್ಟ್ ಲ್ಯಾಂಡ್ ಬೆನ್ನಲ್ಲೇ, ಇಸ್ರೋ ವಿಜ್ಞಾನಿಗಳು ಚಂದ್ರನ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಮಾಡಿದ ಏಕೈಕ ದೇಶ ಭಾರತವಾಗಿದ್ದು, ಇಡೀ ವಿಶ್ವವೇ ಕೊಂಡಾಡುತ್ತಿದೆ. ವಿಜ್ಞಾನಿಗಳ ಈ ಶ್ರಮದ ಕ್ರೆಡಿಟ್ ತೆಗೆದುಕೊಳ್ಳಲು ಹೊರಟಿದ್ದ ಆರೋಪಿ ಕೊನೆಗೂ ಲಾಕ್ ಆಗಿದ್ದಾನೆ.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…