ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಮೃತರನ್ನು ಮಂಡ್ಯ ಮೂಲದ ಮಹಿಳಾ ಅಧಿಕಾರಿ ರಶ್ಮಿ(27) ಎಂದು ತಿಳಿದು ಬಂದಿದೆ.
ಅರಣ್ಯ ಇಲಾಖೆಯ ರಿಸರ್ಚ್ ವಿಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು. ಮಡಿಕೇರಿಯ ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಡಿಕೇರಿಯ ಅರಣ್ಯ ಇಲಾಖೆ ಸಂತಾಪ ಸೂಚಿಸಿದೆ.



