ಚಂದ್ರಯಾನ-3 ಮಿಷನ್ ಸಂಪೂರ್ಣವಾಗಿ ಇಸ್ರೋ ವಿಜ್ಞಾನಿಗಳು ಅಂದುಕೊಂಡಂತೆ ನಡೆಯುತ್ತಿದೆ. ವಿಕ್ರಮ್ ಲ್ಯಾಂಡರ್ ಸೇಫ್ ಆಗಿ ಲ್ಯಾಂಡ್ ಆಗಿದಾಯ್ತು. ಲ್ಯಾಂಡರ್ನಿಂದ ಕೆಳಗಿಳಿದ ಪ್ರಗ್ಯಾನ್ ರೋವರ್ ಸಾರಾಗವಾಗಿ ತನ್ನ ಕೆಲಸವನ್ನು ಆರಂಭಿಸಿದೆ. ಪ್ರಗ್ಯಾನ್ ರೋವರ್ ಜೊತೆ ನಿರಂತರ ಸಂಪರ್ಕದಲ್ಲಿರುವ ಇಸ್ರೋ ವಿಜ್ಞಾನಿಗಳು ಕ್ಷಣ, ಕ್ಷಣದ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದಾರೆ. ಇಂದು ಚಂದ್ರಯಾನ-3 ಮಿಷನ್ನಲ್ಲಿ ಪ್ರಗ್ಯಾನ್ ರೋವರ್ ತೆಗೆದ ಅಪರೂಪದ ಫೋಟೋವೊಂದನ್ನು ಇಸ್ರೋ ಶೇರ್ ಮಾಡಿದೆ.
ಚಂದ್ರನ ದಕ್ಷಿಣ ಧ್ರುವದಲ್ಲಿರುವ ಪ್ರಗ್ಯಾನ್ ರೋವರ್ ಬಹಳಷ್ಟು ಸಕ್ರಿಯವಾಗಿದೆ. ಇಂದು ಬೆಳಗ್ಗೆ ಪ್ರಗ್ಯಾನ್ ರೋವರ್ ಸ್ಮೈಲ್ ಪ್ಲೀಸ್ ಅಂತಾ ವಿಕ್ರಮ್ ಲ್ಯಾಂಡರ್ನ ಫೋಟೋವೊಂದನ್ನ ಕ್ಲಿಕ್ಕಿಸಿದೆ. ಪ್ರಗ್ಯಾನ್ ರೋವರ್ನಲ್ಲಿರುವ ನೇವಿಗೇಶನ್ ಕ್ಯಾಮೆರಾದಿಂದ ತೆಗೆದ ಪೋಟೋ ಇದಾಗಿದ್ದು, ಇಸ್ರೋಗೆ ರವಾನೆ ಮಾಡಿದೆ.
ಲ್ಯಾಬೋರೇಟರಿ ಫಾರ್ ಎಲೆಕ್ಟ್ರೋ ಆಪ್ಟಿಕ್ಸ್ ಸಿಸ್ಟಮ್ಸ್ನಿಂದ ಈ ನೇವಿಗೇಶನ್ ಕ್ಯಾಮೆರಾವನ್ನು ಅಭಿವೃದ್ಧಿ ಮಾಡಲಾಗಿದೆ. ಪ್ರಗ್ಯಾನ್ ರೋವರ್ ಕಣ್ಣಿನಲ್ಲಿ ಕಂಡ ವಿಕ್ರಮ್ ಲ್ಯಾಂಡರ್ ಪೋಟೋವನ್ನು ಇಸ್ರೋ ಇಂದು ಬಿಡುಗಡೆ ಮಾಡಿದೆ.
ಚಂದ್ರನ ಮೇಲ್ಮೈ ಮೇಲೆ ಸಂಶೋಧನೆಗಿಳಿದಿರೋ ಪ್ರಗ್ಯಾನ್ ರೋವರ್ಗೆ ಇನ್ನು 9 ದಿನಗಳು ಮಾತ್ರ ಕಾಲಾವಕಾಶ ಇದೆ. 9 ದಿನಗಳ ಬಳಿಕ ಚಂದ್ರನಲ್ಲಿ ಕತ್ತಲು ಆವರಿಸೋದ್ರಿಂದ ಪ್ರಗ್ಯಾನ್ ರೋವರ್ ಸಂಶೋಧನೆಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ವಿಕ್ರಮ್ ಲ್ಯಾಂಡರ್ ಹಾಗೂ ಪ್ರಗ್ಯಾನ್ ರೋವರ್ ಕಾರ್ಯ ನಿರ್ವಹಿಸಲು ಸೂರ್ಯನ ಬೆಳಕು ಅತಿ ಮುಖ್ಯವಾಗಿದೆ. ಸೋಲಾರ್ ಪ್ಲೇಟ್ಗಳ ಸಹಾಯದಿಂದಲೇ ವಿಕ್ರಮ್ ಮತ್ತು ಪ್ರಗ್ಯಾನ್ ಕಾರ್ಯನಿರ್ವಹಿಸುತ್ತಿದೆ. ಮುಂದಿನ 9 ದಿನಗಳವರೆಗೆ ಮಾತ್ರ ಇದು ಸಾಧ್ಯವಾಗಲಿದೆ. ಬಳಿಕ ಚಂದ್ರನಲ್ಲಿ -200 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ತಾಪಮಾನ ಉಂಟಾಗೋದ್ರಿಂದ ವಿಕ್ರಮ್ ಮತ್ತು ಪ್ರಗ್ಯಾನ್ ನಿಷ್ಕ್ರಿಯಗೊಳ್ಳಲಿದೆ.
ಅಪಘಾತದಲ್ಲಿ ಗಾಯಗೊಂಡಿದ್ದ 10 ತಿಂಗಳ ಹೆಣ್ಣು ಮಗುವಿನ ಮೆದುಳು ನಿಷ್ಕ್ರಿಯಗೊಂಡಿದ್ದ ಹಿನ್ನೆಲೆಯಲ್ಲಿ, ಮಗುವಿನ ಪೋಷಕರು ಕಂದಮ್ಮನ ಅಂಗಾಂಗ ದಾನ ಮಾಡಿ…
ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಮರಳು ಹಾಗೂ ಉಪಕರಣಗಳನ್ನು ವಶಪಡಿಸಿಕೊಂಡ ಘಟನೆ ಕೋಟ ಪೊಲೀಸ್…
ನಗರಸಭೆಯ ಆಸ್ತಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ನಕಲಿ ಸೀಲ್ ಬಳಸಿ ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಮಹಿಳೆ ಸಹಿತ…
ಅಕ್ರಮವಾಗಿ ಸಾಗಿಸುತ್ತಿದ್ದ ಗಾಂಜಾವನ್ನು ವಾಹನ ತಪಾಸಣೆ ವೇಳೆ ಅಬಕಾರಿ ಅಧಿಕಾರಿಗಳು ಮಂಜೇಶ್ವರದಲ್ಲಿ ವಶಪಡಿಸಿಕೊಂಡಿದ್ದಾರೆ. ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನ…
ಬೆಂಗಳೂರು ನಗರದಿಂದ ಮಾದಕವಸ್ತು ಎಂಡಿಎಂಎಯನ್ನು ಖರೀದಿಸಿಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಮಂಗಳೂರು ಸಿ.ಸಿ.ಬಿ.ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರಕ್ಕೆ ಬೆಂಗಳೂರು…
ಬೆಂಗಳೂರು ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.…