ಚಂದ್ರಯಾನ-3 ಮಿಷನ್ ಸಂಪೂರ್ಣವಾಗಿ ಇಸ್ರೋ ವಿಜ್ಞಾನಿಗಳು ಅಂದುಕೊಂಡಂತೆ ನಡೆಯುತ್ತಿದೆ. ವಿಕ್ರಮ್ ಲ್ಯಾಂಡರ್ ಸೇಫ್ ಆಗಿ ಲ್ಯಾಂಡ್ ಆಗಿದಾಯ್ತು. ಲ್ಯಾಂಡರ್ನಿಂದ ಕೆಳಗಿಳಿದ ಪ್ರಗ್ಯಾನ್ ರೋವರ್ ಸಾರಾಗವಾಗಿ ತನ್ನ ಕೆಲಸವನ್ನು ಆರಂಭಿಸಿದೆ. ಪ್ರಗ್ಯಾನ್ ರೋವರ್ ಜೊತೆ ನಿರಂತರ ಸಂಪರ್ಕದಲ್ಲಿರುವ ಇಸ್ರೋ ವಿಜ್ಞಾನಿಗಳು ಕ್ಷಣ, ಕ್ಷಣದ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದಾರೆ. ಇಂದು ಚಂದ್ರಯಾನ-3 ಮಿಷನ್ನಲ್ಲಿ ಪ್ರಗ್ಯಾನ್ ರೋವರ್ ತೆಗೆದ ಅಪರೂಪದ ಫೋಟೋವೊಂದನ್ನು ಇಸ್ರೋ ಶೇರ್ ಮಾಡಿದೆ.
ಚಂದ್ರನ ದಕ್ಷಿಣ ಧ್ರುವದಲ್ಲಿರುವ ಪ್ರಗ್ಯಾನ್ ರೋವರ್ ಬಹಳಷ್ಟು ಸಕ್ರಿಯವಾಗಿದೆ. ಇಂದು ಬೆಳಗ್ಗೆ ಪ್ರಗ್ಯಾನ್ ರೋವರ್ ಸ್ಮೈಲ್ ಪ್ಲೀಸ್ ಅಂತಾ ವಿಕ್ರಮ್ ಲ್ಯಾಂಡರ್ನ ಫೋಟೋವೊಂದನ್ನ ಕ್ಲಿಕ್ಕಿಸಿದೆ. ಪ್ರಗ್ಯಾನ್ ರೋವರ್ನಲ್ಲಿರುವ ನೇವಿಗೇಶನ್ ಕ್ಯಾಮೆರಾದಿಂದ ತೆಗೆದ ಪೋಟೋ ಇದಾಗಿದ್ದು, ಇಸ್ರೋಗೆ ರವಾನೆ ಮಾಡಿದೆ.
ಲ್ಯಾಬೋರೇಟರಿ ಫಾರ್ ಎಲೆಕ್ಟ್ರೋ ಆಪ್ಟಿಕ್ಸ್ ಸಿಸ್ಟಮ್ಸ್ನಿಂದ ಈ ನೇವಿಗೇಶನ್ ಕ್ಯಾಮೆರಾವನ್ನು ಅಭಿವೃದ್ಧಿ ಮಾಡಲಾಗಿದೆ. ಪ್ರಗ್ಯಾನ್ ರೋವರ್ ಕಣ್ಣಿನಲ್ಲಿ ಕಂಡ ವಿಕ್ರಮ್ ಲ್ಯಾಂಡರ್ ಪೋಟೋವನ್ನು ಇಸ್ರೋ ಇಂದು ಬಿಡುಗಡೆ ಮಾಡಿದೆ.
ಚಂದ್ರನ ಮೇಲ್ಮೈ ಮೇಲೆ ಸಂಶೋಧನೆಗಿಳಿದಿರೋ ಪ್ರಗ್ಯಾನ್ ರೋವರ್ಗೆ ಇನ್ನು 9 ದಿನಗಳು ಮಾತ್ರ ಕಾಲಾವಕಾಶ ಇದೆ. 9 ದಿನಗಳ ಬಳಿಕ ಚಂದ್ರನಲ್ಲಿ ಕತ್ತಲು ಆವರಿಸೋದ್ರಿಂದ ಪ್ರಗ್ಯಾನ್ ರೋವರ್ ಸಂಶೋಧನೆಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ವಿಕ್ರಮ್ ಲ್ಯಾಂಡರ್ ಹಾಗೂ ಪ್ರಗ್ಯಾನ್ ರೋವರ್ ಕಾರ್ಯ ನಿರ್ವಹಿಸಲು ಸೂರ್ಯನ ಬೆಳಕು ಅತಿ ಮುಖ್ಯವಾಗಿದೆ. ಸೋಲಾರ್ ಪ್ಲೇಟ್ಗಳ ಸಹಾಯದಿಂದಲೇ ವಿಕ್ರಮ್ ಮತ್ತು ಪ್ರಗ್ಯಾನ್ ಕಾರ್ಯನಿರ್ವಹಿಸುತ್ತಿದೆ. ಮುಂದಿನ 9 ದಿನಗಳವರೆಗೆ ಮಾತ್ರ ಇದು ಸಾಧ್ಯವಾಗಲಿದೆ. ಬಳಿಕ ಚಂದ್ರನಲ್ಲಿ -200 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ತಾಪಮಾನ ಉಂಟಾಗೋದ್ರಿಂದ ವಿಕ್ರಮ್ ಮತ್ತು ಪ್ರಗ್ಯಾನ್ ನಿಷ್ಕ್ರಿಯಗೊಳ್ಳಲಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…