ಜನ ಮನದ ನಾಡಿ ಮಿಡಿತ

Advertisement

ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಪಂಜ ಕೊಯಿಕುಡೆ ಹಾಲು ಉತ್ಪಾದಕರ ಸಹಕಾರ ಸಂಘದ 2022-2023 ನೇ ಸಾಲಿನ ಸರ್ವ ಸದಸ್ಯರ ಸಭೆ

ಮುಲ್ಕಿ: ಪಕ್ಷಿಕೆರೆ ಸಮೀಪದ ಪಂಜ ಕೊಯಿಕುಡೆ ಹಾಲು ಉತ್ಪಾದಕರ ಸಹಕಾರ ಸಂಘದ 2022-2023 ನೇ ಸಾಲಿನ ಸರ್ವ ಸದಸ್ಯರ ಸಭೆಯು ಅಧ್ಯಕ್ಷ ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.
ಒಕ್ಕೂಟದ ಉಪ ವ್ಯವಸ್ಥಾಪಕ ಡಾ. ಚಂದ್ರಶೇಖರ್ ಭಟ್ ರವರು ಮಾತನಾಡಿ ಹಾಲಿನ ಗುಣಮಟ್ಟವನ್ನು ಕಾಪಾಡಲು ಹಸುಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.


ಒಕ್ಕೂಟದ ವಿಸ್ತರಣಾಧಿಕಾರಿ ಸಂದೀಪ್ ರವರು ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಜಗನ್ನಾಥ್ ದೇವಾಡಿಗ, ನಿರ್ದೇಶಕರುಗಳಾದ ವಸಂತ ಶೆಟ್ಟಿ, ಚಂದ್ರಹಾಸ್ ಶೆಟ್ಟಿ, ಸತೀಶ್ ಶೆಟ್ಟಿ, ಸತೀಶ್ ಜೆ ಶೆಟ್ಟಿ, ರಾಜೇಶ್ ಶೆಟ್ಟಿ, ಮೀರಾ, ಶಾರದ ದೇವಾಡಿಗ, ಶೀಲಾ ಜೆ ಕೋಟ್ಯಾನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಘದ ಮಾಜೀ ಅಧ್ಯಕ್ಷರುಗಳಾದ ವಿಶ್ವನಾಥ ಶೆಟ್ಟಿ ಪಂಜದ ಗುತ್ತು , ಸದಾನಂದ ಶೆಟ್ಟಿ ಪಂಜ, ಸತೀಶ್ ಜೆ .ಶೆಟ್ಟಿ ಪಂಜದ ಗುತ್ತು, ಸತೀಶ್ ಎಂ ಶೆಟ್ಟಿ ಬೈಲ ಗುತ್ತು, ನವೀನ್ ಶೆಟ್ಟಿ ನಲ್ಯ ಗುತ್ತು, ಕೆಮ್ರಾಲ್ ಗ್ರಾ.ಪಂ ಸದಸ್ಯ ಸುರೇಶ್ ಪಂಜ ರವರನ್ನು ಮತ್ತು ಕಾರ್ಯದರ್ಶಿಯವರನ್ನು ಸೇವೆಯನ್ನು ಮಾಡಿದ ಸಿಬ್ಬಂದಿಗಳನ್ನು ಗೌರವಿಸಲಾಯಿತು.


ಸಂಘದ ರೈತರಿಗೆ 22ಶೇ ಡಿವಿಡೆಂಟ್ ಫಂಡ್ ಅನ್ನು ವಿತರಿಸಲಾಯಿತು 25ನೇ ವರ್ಷದ ಸವಿನೆನಪಿಗಾಗಿ ಸದಸ್ಯರಿಗೆ ಸ್ಟೀಲ್ ಪಾತ್ರೆಗಳನ್ನು ವಿತರಿಸಲಾಯಿತು ಕಾರ್ಯಕ್ರಮದಲ್ಲಿ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ 85% ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು .
ಸಂಘಕ್ಕೆ 25ನೇ ವರ್ಷದ ಕೊಡುಗೆಯಾಗಿ ರತ್ನ ವಸಂತ ಶೆಟ್ಟಿ ನಲ್ಯ ಗುತ್ತು ರವರು ಧ್ವಜ ಸ್ತಂಭದ ಕಟ್ಟೆಯನ್ನು ನಿರ್ಮಿಸಿ ಕೊಟ್ಟಿದ್ದಾರೆ ಎಂದು ಅಧ್ಯಕ್ಷ ನವೀನ್ ಶೆಟ್ಟಿ ಸಭೆಯಲ್ಲಿ ತಿಳಿಸಿದರು.
ಕಾರ್ಯದರ್ಶಿ ಜಗದೀಶ್ ಶೆಟ್ಟಿ ಧನ್ಯವಾದ ಅರ್ಪಿಸಿದರು ಸತೀಶ್ ಎಂ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!