ಮುಲ್ಕಿ: ಪಕ್ಷಿಕೆರೆ ಸಮೀಪದ ಪಂಜ ಕೊಯಿಕುಡೆ ಹಾಲು ಉತ್ಪಾದಕರ ಸಹಕಾರ ಸಂಘದ 2022-2023 ನೇ ಸಾಲಿನ ಸರ್ವ ಸದಸ್ಯರ ಸಭೆಯು ಅಧ್ಯಕ್ಷ ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.
ಒಕ್ಕೂಟದ ಉಪ ವ್ಯವಸ್ಥಾಪಕ ಡಾ. ಚಂದ್ರಶೇಖರ್ ಭಟ್ ರವರು ಮಾತನಾಡಿ ಹಾಲಿನ ಗುಣಮಟ್ಟವನ್ನು ಕಾಪಾಡಲು ಹಸುಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.
ಒಕ್ಕೂಟದ ವಿಸ್ತರಣಾಧಿಕಾರಿ ಸಂದೀಪ್ ರವರು ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಜಗನ್ನಾಥ್ ದೇವಾಡಿಗ, ನಿರ್ದೇಶಕರುಗಳಾದ ವಸಂತ ಶೆಟ್ಟಿ, ಚಂದ್ರಹಾಸ್ ಶೆಟ್ಟಿ, ಸತೀಶ್ ಶೆಟ್ಟಿ, ಸತೀಶ್ ಜೆ ಶೆಟ್ಟಿ, ರಾಜೇಶ್ ಶೆಟ್ಟಿ, ಮೀರಾ, ಶಾರದ ದೇವಾಡಿಗ, ಶೀಲಾ ಜೆ ಕೋಟ್ಯಾನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಘದ ಮಾಜೀ ಅಧ್ಯಕ್ಷರುಗಳಾದ ವಿಶ್ವನಾಥ ಶೆಟ್ಟಿ ಪಂಜದ ಗುತ್ತು , ಸದಾನಂದ ಶೆಟ್ಟಿ ಪಂಜ, ಸತೀಶ್ ಜೆ .ಶೆಟ್ಟಿ ಪಂಜದ ಗುತ್ತು, ಸತೀಶ್ ಎಂ ಶೆಟ್ಟಿ ಬೈಲ ಗುತ್ತು, ನವೀನ್ ಶೆಟ್ಟಿ ನಲ್ಯ ಗುತ್ತು, ಕೆಮ್ರಾಲ್ ಗ್ರಾ.ಪಂ ಸದಸ್ಯ ಸುರೇಶ್ ಪಂಜ ರವರನ್ನು ಮತ್ತು ಕಾರ್ಯದರ್ಶಿಯವರನ್ನು ಸೇವೆಯನ್ನು ಮಾಡಿದ ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಸಂಘದ ರೈತರಿಗೆ 22ಶೇ ಡಿವಿಡೆಂಟ್ ಫಂಡ್ ಅನ್ನು ವಿತರಿಸಲಾಯಿತು 25ನೇ ವರ್ಷದ ಸವಿನೆನಪಿಗಾಗಿ ಸದಸ್ಯರಿಗೆ ಸ್ಟೀಲ್ ಪಾತ್ರೆಗಳನ್ನು ವಿತರಿಸಲಾಯಿತು ಕಾರ್ಯಕ್ರಮದಲ್ಲಿ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ 85% ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು .
ಸಂಘಕ್ಕೆ 25ನೇ ವರ್ಷದ ಕೊಡುಗೆಯಾಗಿ ರತ್ನ ವಸಂತ ಶೆಟ್ಟಿ ನಲ್ಯ ಗುತ್ತು ರವರು ಧ್ವಜ ಸ್ತಂಭದ ಕಟ್ಟೆಯನ್ನು ನಿರ್ಮಿಸಿ ಕೊಟ್ಟಿದ್ದಾರೆ ಎಂದು ಅಧ್ಯಕ್ಷ ನವೀನ್ ಶೆಟ್ಟಿ ಸಭೆಯಲ್ಲಿ ತಿಳಿಸಿದರು.
ಕಾರ್ಯದರ್ಶಿ ಜಗದೀಶ್ ಶೆಟ್ಟಿ ಧನ್ಯವಾದ ಅರ್ಪಿಸಿದರು ಸತೀಶ್ ಎಂ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…