ಕಟ್ಟಡದ ಮೇಲಿಂದ ಉದ್ಯಮಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ನಾಗರಬಾವಿ ಬಳಿ ನಡೆದಿದೆ. ಸಾವನ್ನಪ್ಪಿರೋ ಉದ್ಯಮಿಯನ್ನು 62 ವರ್ಷದ ಮಾರಾಂಜಿನಪ್ಪ ಎಂದು ಗುರುತಿಸಲಾಗಿದೆ.
ಉದ್ಯಮಿ ಮಾರಾಂಜಿನಪ್ಪ ಅವರಿಗೆ ಎರಡನೇ ಮದುವೆಯಾಗಿದ್ದು, 2ನೇ ಪತ್ನಿ ಮನೆ ಮೇಲಿಂದ ಬಿದ್ದು ಸಾವನ್ನಪ್ಪಿರೋದು ಹಲವು ಅನುಮಾನಕ್ಕೆ ಕಾರಣವಾಗಿದೆ.
ಇಂದು ತಡರಾತ್ರಿ 3 ಗಂಟೆ ಸುಮಾರಿಗೆ ಮಾರಾಂಜಿನಪ್ಪ ಕಟ್ಟಡದ ಮೇಲಿಂದ ಕೆಳಗೆ ಬಿದ್ದಿದ್ದಾರೆ. ಕಟ್ಟಡದಿಂದ ಬಿದ್ದ ಉದ್ಯಮಿಯನ್ನ ಆತನ ಎರಡನೇ ಪತ್ನಿಯೇ ಆಸ್ಪತ್ರೆಗೆ ಸೇರಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಾರಾಂಜಿನಪ್ಪ ಸಾವನ್ನಪ್ಪಿದ್ದಾರೆ.
ಉದ್ಯಮಿ ಮಾರಾಂಜಿನಪ್ಪ ಅವರು ಎರಡನೇ ಪತ್ನಿ ಮನೆಯಿಂದ ಬಿದ್ದು ಸಾವನ್ನಪ್ಪಿದ್ದು, ಮಾರಾಂಜಿನಪ್ಪ ಕುಟುಂಬಸ್ಥರು ಆಕೆಯ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಟ್ಟಡದ ಮೇಲಿಂದ ಬಿದ್ದಿರೋ ಮಾರಾಂಜಿನಪ್ಪ ಅವರ ಸಾವು ಅನುಮಾನಾಸ್ಪದ ರೀತಿಯಲ್ಲಿದೆ. ಎರಡನೇ ಪತ್ನಿ ಮೇಲೆ ಮೃತ ಮಾರಾಂಜಿನಪ್ಪ ಮೊದಲನೇ ಪತ್ನಿ ಕೊಲೆ ಆರೋಪ ಮಾಡಿ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.…
ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ…
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…