ಮೊನ್ನೆ ಮೊನ್ನೆಯಷ್ಟೇ ಭಾರತದ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಚಂದ್ರಯಾನ-3 ಯೋಜನೆಯಲ್ಲಿ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಇಸ್ರೋ ಮತ್ತೊಂದು ವಿಶೇಷ ಸಾಧನೆ ಮಾಡುತ್ತಿದ್ದು ಈ ಬಾರಿ ನೇರ ಸೂರ್ಯನನ್ನೇ ಟಾರ್ಗೆಟ್ ಮಾಡಿದೆ.
ಈಗಾಗಲೇ ಈ ಯೋಜನೆಯು ಕೊನೆ ಹಂತ ತಲುಪಿದ್ದು ಸೂರ್ಯನನ್ನ ಅಧ್ಯಯನ ಮಾಡುವ ಆದಿತ್ಯ-L1 ಮಿಷನ್ನ ಪೂರ್ವಾಭ್ಯಾಸ (ರಿಹರ್ಸಲ್)ವನ್ನು ಸದ್ಯ ಇಸ್ರೋ ಮುಗಿಸಿದೆ ಎಂದು ತಿಳಿದು ಬಂದಿದೆ.
ಆದಿತ್ಯ-L1 ಮಿಷನ್ನ ಉಡಾವಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ಮಿಷನ್ ಅನ್ನು ಲಾಂಚ್ ಮಾಡುವ ಕಾರ್ಯಕ್ಕಾಗಿ ಇಂದು ಪೂರ್ವಾಭ್ಯಾಸ ನಡೆಸಿ ರಾಕೆಟ್ ವೆಹಿಕಲ್ ಅಂತರಿಕ ಪರೀಕ್ಷೆಯನ್ನು ಶ್ರೀಹರಿಕೋಟಾದಲ್ಲಿ ಮುಗಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಾಣದಿದ್ದರಿಂದ ಇಸ್ರೋ ಯಶಸ್ವಿಯಾಗಿ ರಿಹರ್ಸಲ್ ಮುಗಿಸಿದೆ.
ಈ ಬಗ್ಗೆ ಇಸ್ರೋ ತನ್ನ ಅಧೀಕೃತ ಎಕ್ಸ್ನಲ್ಲಿ ಮಾಹಿತಿ ನೀಡಿದ್ದು ಸೆಪ್ಟೆಂಬರ್ 2 ರಂದು ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಮಿಷನ್ ಅನ್ನು ಲಾಂಚ್ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ ಸಿದ್ಧತೆ ನಡೆದಿವೆ ಎಂದು ಇಸ್ರೋ ಮಾಹಿತಿ ನೀಡಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…