ಮೊನ್ನೆ ಮೊನ್ನೆಯಷ್ಟೇ ಭಾರತದ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಚಂದ್ರಯಾನ-3 ಯೋಜನೆಯಲ್ಲಿ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಇಸ್ರೋ ಮತ್ತೊಂದು ವಿಶೇಷ ಸಾಧನೆ ಮಾಡುತ್ತಿದ್ದು ಈ ಬಾರಿ ನೇರ ಸೂರ್ಯನನ್ನೇ ಟಾರ್ಗೆಟ್ ಮಾಡಿದೆ.
ಈಗಾಗಲೇ ಈ ಯೋಜನೆಯು ಕೊನೆ ಹಂತ ತಲುಪಿದ್ದು ಸೂರ್ಯನನ್ನ ಅಧ್ಯಯನ ಮಾಡುವ ಆದಿತ್ಯ-L1 ಮಿಷನ್ನ ಪೂರ್ವಾಭ್ಯಾಸ (ರಿಹರ್ಸಲ್)ವನ್ನು ಸದ್ಯ ಇಸ್ರೋ ಮುಗಿಸಿದೆ ಎಂದು ತಿಳಿದು ಬಂದಿದೆ.
ಆದಿತ್ಯ-L1 ಮಿಷನ್ನ ಉಡಾವಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ಮಿಷನ್ ಅನ್ನು ಲಾಂಚ್ ಮಾಡುವ ಕಾರ್ಯಕ್ಕಾಗಿ ಇಂದು ಪೂರ್ವಾಭ್ಯಾಸ ನಡೆಸಿ ರಾಕೆಟ್ ವೆಹಿಕಲ್ ಅಂತರಿಕ ಪರೀಕ್ಷೆಯನ್ನು ಶ್ರೀಹರಿಕೋಟಾದಲ್ಲಿ ಮುಗಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಾಣದಿದ್ದರಿಂದ ಇಸ್ರೋ ಯಶಸ್ವಿಯಾಗಿ ರಿಹರ್ಸಲ್ ಮುಗಿಸಿದೆ.
ಈ ಬಗ್ಗೆ ಇಸ್ರೋ ತನ್ನ ಅಧೀಕೃತ ಎಕ್ಸ್ನಲ್ಲಿ ಮಾಹಿತಿ ನೀಡಿದ್ದು ಸೆಪ್ಟೆಂಬರ್ 2 ರಂದು ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಮಿಷನ್ ಅನ್ನು ಲಾಂಚ್ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ ಸಿದ್ಧತೆ ನಡೆದಿವೆ ಎಂದು ಇಸ್ರೋ ಮಾಹಿತಿ ನೀಡಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…