ಅಂತಾರಾಷ್ಟ್ರೀಯ

ಚಂದ್ರಯಾನ-3 ಬೆನ್ನಲ್ಲೇ ಮತ್ತೊಂದು ಸಾಹಸಕ್ಕೆ ಕೈ ಹಾಕಿದ ಇಸ್ರೋ

ಮೊನ್ನೆ ಮೊನ್ನೆಯಷ್ಟೇ ಭಾರತದ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಚಂದ್ರಯಾನ-3 ಯೋಜನೆಯಲ್ಲಿ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಇಸ್ರೋ ಮತ್ತೊಂದು ವಿಶೇಷ ಸಾಧನೆ ಮಾಡುತ್ತಿದ್ದು ಈ ಬಾರಿ ನೇರ ಸೂರ್ಯನನ್ನೇ ಟಾರ್ಗೆಟ್ ಮಾಡಿದೆ.

ಈಗಾಗಲೇ ಈ ಯೋಜನೆಯು ಕೊನೆ ಹಂತ ತಲುಪಿದ್ದು ಸೂರ್ಯನನ್ನ ಅಧ್ಯಯನ ಮಾಡುವ ಆದಿತ್ಯ-L1 ಮಿಷನ್​ನ ಪೂರ್ವಾಭ್ಯಾಸ (ರಿಹರ್ಸಲ್​)ವನ್ನು ಸದ್ಯ ಇಸ್ರೋ ಮುಗಿಸಿದೆ ಎಂದು ತಿಳಿದು ಬಂದಿದೆ.

ಆದಿತ್ಯ-L1 ಮಿಷನ್​ನ ಉಡಾವಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ಮಿಷನ್​ ಅನ್ನು ಲಾಂಚ್ ಮಾಡುವ ಕಾರ್ಯಕ್ಕಾಗಿ ಇಂದು ಪೂರ್ವಾಭ್ಯಾಸ ನಡೆಸಿ ರಾಕೆಟ್​ ವೆಹಿಕಲ್ ಅಂತರಿಕ ಪರೀಕ್ಷೆಯನ್ನು ಶ್ರೀಹರಿಕೋಟಾದಲ್ಲಿ ಮುಗಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಾಣದಿದ್ದರಿಂದ ಇಸ್ರೋ ಯಶಸ್ವಿಯಾಗಿ ರಿಹರ್ಸಲ್ ಮುಗಿಸಿದೆ.

ಈ ಬಗ್ಗೆ ಇಸ್ರೋ ತನ್ನ ಅಧೀಕೃತ ಎಕ್ಸ್​ನಲ್ಲಿ ಮಾಹಿತಿ ನೀಡಿದ್ದು ಸೆಪ್ಟೆಂಬರ್​ 2 ರಂದು ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಮಿಷನ್​ ಅನ್ನು ಲಾಂಚ್​ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ ಸಿದ್ಧತೆ ನಡೆದಿವೆ ಎಂದು ಇಸ್ರೋ ಮಾಹಿತಿ ನೀಡಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 hours ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 hours ago

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…

2 hours ago

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…

2 hours ago

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…

2 days ago

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…

2 days ago