ಜನ ಮನದ ನಾಡಿ ಮಿಡಿತ

Advertisement

ಭಾರತ-ಪಾಕ್​ ಗಡಿಯಲ್ಲಿ ತಂತಿ ಬೇಲಿ ಕತ್ತರಿಸಿದ ತಮಿಳುನಾಡು ಮೂಲದ ವ್ಯಕ್ತಿ

ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಎಸ್ಕೇಪ್​ ಆಗಲು ಯತ್ನಿಸುತ್ತಿದ್ದ ತಮಿಳುನಾಡು ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಗಡಿಯಲ್ಲಿ ಹಾಕಲಾಗಿದ್ದ ತಂತಿಯನ್ನ ಕತ್ತರಿಸಲು ಮುಂದಾಗಿದ್ದ, ಈ ವೇಳೆ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿದ್ದಾನೆ.

ಸ್ಥಳೀಯ ಪೊಲೀಸರು ಆತನ ಬ್ಯಾಗ್‌ನಿಂದ ಹಲವು ವಸ್ತುಗಳನ್ನು ಪತ್ತೆ ಮಾಡಿದ್ದಾರೆ. ಇದರಲ್ಲಿ ಕೈಯಿಂದ ಮಾಡಿದ ನಕ್ಷೆ, ಸ್ಕ್ರೂಡ್ರೈವರ್, ಸ್ಪ್ಯಾನರ್, ಕತ್ತರಿಸುವ ಇಕ್ಕಳ, ಕತ್ತರಿ, ಪಾಸ್‌ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್ ಮತ್ತು ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್ ಕೂಡ ಸೇರಿದೆ. ಪ್ಯಾನ್ ಕಾರ್ಡ್ ಮತ್ತು ಇಂಟರ್​ನ್ಯಾಷನಲ್ ಡೆಬಿಟ್ ಕಾರ್ಡ್ ಕೂಡ ಸೇರಿದೆ. ಪ್ಯಾನ್ ಕಾರ್ಡ್ ಕೂಡ ಇದೆ ಎನ್ನಲಾಗಿದೆ.


ಮುಂಬೈನಿಂದ ಸುರೇಂದ್ರನಗರಕ್ಕೆ ರೈಲು ಟಿಕೆಟ್ ಹಾಗೂ 10 ಸಾವಿರ ನಗದು ಪತ್ತೆಯಾಗಿದೆ. ಸ್ಥಳೀಯ ಪೊಲೀಸರ ಪ್ರಶ್ನೆಗಳಿಗೆ ತೃಪ್ತಿಕರ ಉತ್ತರ ನೀಡದ ಕಾರಣ ಆತನನ್ನು ಹೆಚ್ಚಿನ ವಿಚಾರಣೆಗಾಗಿ ಬೇರೆ ಕಡೆ ಕರೆದೊಯ್ಯಲಾಗಿದೆ.

ಬಂಧಿತ ವ್ಯಕ್ತಿ ತಮಿಳುನಾಡಿನ ತೇಣಿ ಜಿಲ್ಲೆಯ ನಿವಾಸಿ. ಸದ್ಯ ಪೊಲೀಸರು ವ್ಯಕ್ತಿಯ ಉದ್ದೇಶವನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಗಡಿ ಭದ್ರತಾ ಪಡೆಯು ರಾಪರ್ ತಾಲೂಕಿನ ಲೊದ್ರಾಣಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅರೆಸ್ಟ್ ಮಾಡಲಾಗಿದೆ.  ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಚಲಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಆದರೆ ಕಚ್‌ಗೆ ಬಂದಿರುವ ಕಾರಣವನ್ನು ವ್ಯಕ್ತಿ ಇನ್ನೂ ನೀಡಿಲ್ಲ. ಸ್ಥಳೀಯ ಪೊಲೀಸರು ಮತ್ತು ಕೇಂದ್ರೀಯ ಸಂಸ್ಥೆಗಳು ಆತನನ್ನು ನಿರಂತರವಾಗಿ ವಿಚಾರಣೆ ನಡೆಸುತ್ತಿವೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!