ತಮಿಳುನಾಡಿನ ಕೊಡೈಕೆನಾಲ್ ವಿಲ್ಪಟ್ಟಿ ಪಂಚಾಯತ್ನಲ್ಲಿ ಬಂಗಲೆ ನಿರ್ಮಿಸಲು ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡ ಆರೋಪ ಬಹುಭಾಷಾ ನಟ ಪ್ರಕಾಶ್ ರಾಜ್ ವಿರುದ್ಧ ಕೇಳಿ ಬಂದಿದೆ.
ಹೀಗಾಗಿ ಈ ಸಂಬಂಧ ವಿವರಣೆ ನೀಡಿ ಎಂದು ಪ್ರಕಾಶ್ ರಾಜ್ಗೆ ಕೊಡೈಕೆನಾಲ್ ವಲಯ ಉಪ ಬ್ಲಾಕ್ ಡೆವಲಪ್ಮೆಂಟ್ ಅಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ. ಸದ್ಯ ತನ್ನ ಮೇಲಿನ ಆರೋಪಕ್ಕೆ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರೋ ನಟ ಪ್ರಕಾಶ್ ರಾಜ್, ಆಪಾದಿಸಿದವರು ಆಪಾದನೆ ಮಾಡಿದ್ದಾರೆ. ವಿವರಣೆ ಕೇಳಲೇಬೇಕಾದ ಅಧಿಕಾರಿಗಳು ವಿವರಣೆ ಕೇಳಿದ್ದಾರೆ. ನನ್ನ ಬಳಿ ಇರೋ ಅಧಿಕೃತ ದಾಖಲೆ ಪತ್ರಗಳನ್ನು ಕೊಟ್ಟಿದ್ದೇನೆ. ನಿಜ ಗೊತ್ತಾಗಲಿ, ಸ್ವಲ್ಪ ಕಾಯಿರಿ ಎಂದು ತನ್ನನ್ನು ಟ್ರೋಲ್ ಮಾಡಿದವರಿಗೆ ಸ್ಪಷ್ಟನೆ ನೀಡಿದ್ದಾರೆ.
ಭಾರತೀಪುರಂ ಅಣ್ಣಾನಗರ ಗ್ರಾಮದಲ್ಲಿ ಪ್ರಕಾಶ್ ರಾಜ್ಗೆ ಪಟ್ಟಾ ಜಮೀನು ಇದೆ. ಪಂಚಾಯಿತಿಯಿಂದ ಅನುಮತಿ ಪಡೆಯದೆ ಬಂಗಲೆ ನಿರ್ಮಿಸಿದ್ದಾರೆ ಎಂದು ಸಂಬಂಧಪಟ್ಟ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಪೇತುಪರೈ ಗ್ರಾಮದ ಅಧ್ಯಕ್ಷ ಕೆ.ವಿ ಮಹೇಂದ್ರನ್ ಎಂಬುವರು ಪ್ರಕಾಶ್ ರಾಜ್ ವಿರುದ್ಧ ಈ ಆರೋಪ ಮಾಡಿದ್ದಾರೆ. ಬಂಗಲೆ ನಿರ್ಮಿಸಲು ಪೇತುಪರೈ ಮತ್ತು ಭಾರತಿಪುರಂ ಅಣ್ಣಾನಗರ ಬಳಿಯ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ಅನುಮತಿ ಕೂಡ ಪಡೆದಿಲ್ಲ. ಸಾರ್ವಜನಿಕ ರಸ್ತೆ ಅತಿಕ್ರಮಿಸಿ ಬಂಗೆಲೆ ನಿರ್ಮಿಸಿದ್ದಲ್ಲದೇ ಯಾರಿಗೂ ಓಡಾಟ ನಡೆಸಲು ಅವಕಾಶ ನೀಡಿಲ್ಲ ಎಂದು ದೂರಲಾಗಿದೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…