ತಮಿಳುನಾಡಿನ ಕೊಡೈಕೆನಾಲ್ ವಿಲ್ಪಟ್ಟಿ ಪಂಚಾಯತ್ನಲ್ಲಿ ಬಂಗಲೆ ನಿರ್ಮಿಸಲು ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡ ಆರೋಪ ಬಹುಭಾಷಾ ನಟ ಪ್ರಕಾಶ್ ರಾಜ್ ವಿರುದ್ಧ ಕೇಳಿ ಬಂದಿದೆ.
ಹೀಗಾಗಿ ಈ ಸಂಬಂಧ ವಿವರಣೆ ನೀಡಿ ಎಂದು ಪ್ರಕಾಶ್ ರಾಜ್ಗೆ ಕೊಡೈಕೆನಾಲ್ ವಲಯ ಉಪ ಬ್ಲಾಕ್ ಡೆವಲಪ್ಮೆಂಟ್ ಅಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ. ಸದ್ಯ ತನ್ನ ಮೇಲಿನ ಆರೋಪಕ್ಕೆ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರೋ ನಟ ಪ್ರಕಾಶ್ ರಾಜ್, ಆಪಾದಿಸಿದವರು ಆಪಾದನೆ ಮಾಡಿದ್ದಾರೆ. ವಿವರಣೆ ಕೇಳಲೇಬೇಕಾದ ಅಧಿಕಾರಿಗಳು ವಿವರಣೆ ಕೇಳಿದ್ದಾರೆ. ನನ್ನ ಬಳಿ ಇರೋ ಅಧಿಕೃತ ದಾಖಲೆ ಪತ್ರಗಳನ್ನು ಕೊಟ್ಟಿದ್ದೇನೆ. ನಿಜ ಗೊತ್ತಾಗಲಿ, ಸ್ವಲ್ಪ ಕಾಯಿರಿ ಎಂದು ತನ್ನನ್ನು ಟ್ರೋಲ್ ಮಾಡಿದವರಿಗೆ ಸ್ಪಷ್ಟನೆ ನೀಡಿದ್ದಾರೆ.
ಭಾರತೀಪುರಂ ಅಣ್ಣಾನಗರ ಗ್ರಾಮದಲ್ಲಿ ಪ್ರಕಾಶ್ ರಾಜ್ಗೆ ಪಟ್ಟಾ ಜಮೀನು ಇದೆ. ಪಂಚಾಯಿತಿಯಿಂದ ಅನುಮತಿ ಪಡೆಯದೆ ಬಂಗಲೆ ನಿರ್ಮಿಸಿದ್ದಾರೆ ಎಂದು ಸಂಬಂಧಪಟ್ಟ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಪೇತುಪರೈ ಗ್ರಾಮದ ಅಧ್ಯಕ್ಷ ಕೆ.ವಿ ಮಹೇಂದ್ರನ್ ಎಂಬುವರು ಪ್ರಕಾಶ್ ರಾಜ್ ವಿರುದ್ಧ ಈ ಆರೋಪ ಮಾಡಿದ್ದಾರೆ. ಬಂಗಲೆ ನಿರ್ಮಿಸಲು ಪೇತುಪರೈ ಮತ್ತು ಭಾರತಿಪುರಂ ಅಣ್ಣಾನಗರ ಬಳಿಯ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ಅನುಮತಿ ಕೂಡ ಪಡೆದಿಲ್ಲ. ಸಾರ್ವಜನಿಕ ರಸ್ತೆ ಅತಿಕ್ರಮಿಸಿ ಬಂಗೆಲೆ ನಿರ್ಮಿಸಿದ್ದಲ್ಲದೇ ಯಾರಿಗೂ ಓಡಾಟ ನಡೆಸಲು ಅವಕಾಶ ನೀಡಿಲ್ಲ ಎಂದು ದೂರಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…