ಜನ ಮನದ ನಾಡಿ ಮಿಡಿತ

Advertisement

ಕಡಲಿಗೆ ಕಲ್ಲು ಹಾಕುವ ಕಾಮಗಾರಿ ಸ್ಥಗಿತ!

ಹಿಂದಿನ ಸರಕಾರದ ವೇಳೆ ಉಳ್ಳಾಲದ ಬಟ್ಟಪಾಡಿಯಲ್ಲಿ ತೀವ್ರ ಕಡಲ್ಕೊರೆತದಿಂದ ತೀರ ಕೊಚ್ಚಿ ಹೋಗಿದ್ದು ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀವೇವ್‌ ಬ್ರೇಕರ್‌ ನಿರ್ಮಾಣ ಮಾಡುವುದಾಗಿ ಹೇಳಿ ಕೊನೆಯಲ್ಲಿ ಸಾಕಷ್ಟು ಅಧ್ಯಯನ ಬಳಿಕ ಅದನ್ನು ಬಹುತೇಕ ಕೈಬಿಡಲಾಗಿದೆ.

ಸದ್ಯ ಶಾಶ್ವತ ಪರಿಹಾರ ಅಸಾಧ್ಯ, ತುರ್ತಾಗಿ ಕಡಲಿಗೆ ಕಲ್ಲು ಹಾಕುವ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಸ್ಥಳೀಯ ಶಾಸಕರು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಹಾಗೂ ಆ ಬಳಿಕ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಸೂಚಿಸಿದ್ದರು.

ಅದರಂತೆ ಬಂದರು ಇಲಾಖೆ ಯವರೂ ಕೆಲವು ಗುತ್ತಿಗೆದಾರರನ್ನು ವ್ಯವಸ್ಥೆ ಮಾಡಿದ್ದರು. ಒಟ್ಟು 1.6 ಕೋಟಿ ರೂ. ಅಂದಾಜು ಮೊತ್ತಕ್ಕೆ ಉಳ್ಳಾಲದ ಸೀಗ್ರೌಂಡ್ಸ್‌ ಹಾಗೂ ಬಟ್ಟಪಾಡಿಯಲ್ಲಿ ಕಡಲ ತೀರಕ್ಕೆ ಕಲ್ಲು ಹಾಕುವ ಕೆಲಸವನ್ನು ಗುತ್ತಿಗೆದಾರರಿಗೆ ನೀಡಲಾಗಿತ್ತು. ಅದರಲ್ಲಿ ಸುಮಾರು ಶೇ. 50ರಷ್ಟು ಕೆಲಸವಾದರೂ ಇಲಾಖೆಯಿಂದ ಹಣ ಬರುವ ಸಾಧ್ಯತೆ ಕಾಣದಾದಾಗ ಗುತ್ತಿಗೆದಾರರು ಇದು “ಹಿಂದಿನ ಅನುಭವ’ ಎಂದು ಅಲ್ಲಿಗೇ ಕೆಲಸ ಸ್ಥಗಿತಗೊಳಿಸಿ ಹೋಗಿದ್ದಾರೆ.

ಆ ಮೂಲಕ ಕಳೆದ 5 ವರ್ಷಗಳಿಂದ ಆಗುತ್ತಿದ್ದ ಸಂಪ್ರದಾಯ ಈ ವರ್ಷವೂ ಮುಂದುವರಿದಂತಾಗಿದೆ. ಗುತ್ತಿಗೆದಾರರಿಗೆ ಬರಬೇಕಾದ ಮೊತ್ತ 25.14 ಕೋಟಿ ರೂ.ಗೆ ಏರಿಕೆಯಾಗಿದೆ. 2018-19ರಲ್ಲಿ ಸೋಮೇಶ್ವರ ಭಾಗದಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿ ತಕ್ಷಣಕ್ಕೆ ಬೇಕಾದ ಸುಮಾರು 2.3 ಕಿ.ಮೀ ಭಾಗಕ್ಕೆ ಕಲ್ಲು ಹಾಕಲಾಗಿತ್ತು. ಆದರೆ ಇದಕ್ಕೆ ಸರಕಾರದಿಂದ ಅನುಮೋದನೆ ಸಿಗದೆ ಈ ಮೊತ್ತ ಹಾಗೆಯೇ ಬಾಕಿಯಾಗಿತ್ತು. ಅದಕ್ಕೆ ಅನಂತರದ ವರ್ಷಗಳಲ್ಲಿ ಮೊತ್ತ ಸೇರ್ಪಡೆಯಾಗುತ್ತಲೇ ಹೋಗಿದೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!