ಹಿಂದಿನ ಸರಕಾರದ ವೇಳೆ ಉಳ್ಳಾಲದ ಬಟ್ಟಪಾಡಿಯಲ್ಲಿ ತೀವ್ರ ಕಡಲ್ಕೊರೆತದಿಂದ ತೀರ ಕೊಚ್ಚಿ ಹೋಗಿದ್ದು ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀವೇವ್ ಬ್ರೇಕರ್ ನಿರ್ಮಾಣ ಮಾಡುವುದಾಗಿ ಹೇಳಿ ಕೊನೆಯಲ್ಲಿ ಸಾಕಷ್ಟು ಅಧ್ಯಯನ ಬಳಿಕ ಅದನ್ನು ಬಹುತೇಕ ಕೈಬಿಡಲಾಗಿದೆ.
ಸದ್ಯ ಶಾಶ್ವತ ಪರಿಹಾರ ಅಸಾಧ್ಯ, ತುರ್ತಾಗಿ ಕಡಲಿಗೆ ಕಲ್ಲು ಹಾಕುವ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಸ್ಥಳೀಯ ಶಾಸಕರು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ಆ ಬಳಿಕ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಸೂಚಿಸಿದ್ದರು.
ಅದರಂತೆ ಬಂದರು ಇಲಾಖೆ ಯವರೂ ಕೆಲವು ಗುತ್ತಿಗೆದಾರರನ್ನು ವ್ಯವಸ್ಥೆ ಮಾಡಿದ್ದರು. ಒಟ್ಟು 1.6 ಕೋಟಿ ರೂ. ಅಂದಾಜು ಮೊತ್ತಕ್ಕೆ ಉಳ್ಳಾಲದ ಸೀಗ್ರೌಂಡ್ಸ್ ಹಾಗೂ ಬಟ್ಟಪಾಡಿಯಲ್ಲಿ ಕಡಲ ತೀರಕ್ಕೆ ಕಲ್ಲು ಹಾಕುವ ಕೆಲಸವನ್ನು ಗುತ್ತಿಗೆದಾರರಿಗೆ ನೀಡಲಾಗಿತ್ತು. ಅದರಲ್ಲಿ ಸುಮಾರು ಶೇ. 50ರಷ್ಟು ಕೆಲಸವಾದರೂ ಇಲಾಖೆಯಿಂದ ಹಣ ಬರುವ ಸಾಧ್ಯತೆ ಕಾಣದಾದಾಗ ಗುತ್ತಿಗೆದಾರರು ಇದು “ಹಿಂದಿನ ಅನುಭವ’ ಎಂದು ಅಲ್ಲಿಗೇ ಕೆಲಸ ಸ್ಥಗಿತಗೊಳಿಸಿ ಹೋಗಿದ್ದಾರೆ.
ಆ ಮೂಲಕ ಕಳೆದ 5 ವರ್ಷಗಳಿಂದ ಆಗುತ್ತಿದ್ದ ಸಂಪ್ರದಾಯ ಈ ವರ್ಷವೂ ಮುಂದುವರಿದಂತಾಗಿದೆ. ಗುತ್ತಿಗೆದಾರರಿಗೆ ಬರಬೇಕಾದ ಮೊತ್ತ 25.14 ಕೋಟಿ ರೂ.ಗೆ ಏರಿಕೆಯಾಗಿದೆ. 2018-19ರಲ್ಲಿ ಸೋಮೇಶ್ವರ ಭಾಗದಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿ ತಕ್ಷಣಕ್ಕೆ ಬೇಕಾದ ಸುಮಾರು 2.3 ಕಿ.ಮೀ ಭಾಗಕ್ಕೆ ಕಲ್ಲು ಹಾಕಲಾಗಿತ್ತು. ಆದರೆ ಇದಕ್ಕೆ ಸರಕಾರದಿಂದ ಅನುಮೋದನೆ ಸಿಗದೆ ಈ ಮೊತ್ತ ಹಾಗೆಯೇ ಬಾಕಿಯಾಗಿತ್ತು. ಅದಕ್ಕೆ ಅನಂತರದ ವರ್ಷಗಳಲ್ಲಿ ಮೊತ್ತ ಸೇರ್ಪಡೆಯಾಗುತ್ತಲೇ ಹೋಗಿದೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…