ಹಿಂದಿನ ಸರಕಾರದ ವೇಳೆ ಉಳ್ಳಾಲದ ಬಟ್ಟಪಾಡಿಯಲ್ಲಿ ತೀವ್ರ ಕಡಲ್ಕೊರೆತದಿಂದ ತೀರ ಕೊಚ್ಚಿ ಹೋಗಿದ್ದು ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀವೇವ್ ಬ್ರೇಕರ್ ನಿರ್ಮಾಣ ಮಾಡುವುದಾಗಿ ಹೇಳಿ ಕೊನೆಯಲ್ಲಿ ಸಾಕಷ್ಟು ಅಧ್ಯಯನ ಬಳಿಕ ಅದನ್ನು ಬಹುತೇಕ ಕೈಬಿಡಲಾಗಿದೆ.
ಸದ್ಯ ಶಾಶ್ವತ ಪರಿಹಾರ ಅಸಾಧ್ಯ, ತುರ್ತಾಗಿ ಕಡಲಿಗೆ ಕಲ್ಲು ಹಾಕುವ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಸ್ಥಳೀಯ ಶಾಸಕರು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ಆ ಬಳಿಕ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಸೂಚಿಸಿದ್ದರು.
ಅದರಂತೆ ಬಂದರು ಇಲಾಖೆ ಯವರೂ ಕೆಲವು ಗುತ್ತಿಗೆದಾರರನ್ನು ವ್ಯವಸ್ಥೆ ಮಾಡಿದ್ದರು. ಒಟ್ಟು 1.6 ಕೋಟಿ ರೂ. ಅಂದಾಜು ಮೊತ್ತಕ್ಕೆ ಉಳ್ಳಾಲದ ಸೀಗ್ರೌಂಡ್ಸ್ ಹಾಗೂ ಬಟ್ಟಪಾಡಿಯಲ್ಲಿ ಕಡಲ ತೀರಕ್ಕೆ ಕಲ್ಲು ಹಾಕುವ ಕೆಲಸವನ್ನು ಗುತ್ತಿಗೆದಾರರಿಗೆ ನೀಡಲಾಗಿತ್ತು. ಅದರಲ್ಲಿ ಸುಮಾರು ಶೇ. 50ರಷ್ಟು ಕೆಲಸವಾದರೂ ಇಲಾಖೆಯಿಂದ ಹಣ ಬರುವ ಸಾಧ್ಯತೆ ಕಾಣದಾದಾಗ ಗುತ್ತಿಗೆದಾರರು ಇದು “ಹಿಂದಿನ ಅನುಭವ’ ಎಂದು ಅಲ್ಲಿಗೇ ಕೆಲಸ ಸ್ಥಗಿತಗೊಳಿಸಿ ಹೋಗಿದ್ದಾರೆ.
ಆ ಮೂಲಕ ಕಳೆದ 5 ವರ್ಷಗಳಿಂದ ಆಗುತ್ತಿದ್ದ ಸಂಪ್ರದಾಯ ಈ ವರ್ಷವೂ ಮುಂದುವರಿದಂತಾಗಿದೆ. ಗುತ್ತಿಗೆದಾರರಿಗೆ ಬರಬೇಕಾದ ಮೊತ್ತ 25.14 ಕೋಟಿ ರೂ.ಗೆ ಏರಿಕೆಯಾಗಿದೆ. 2018-19ರಲ್ಲಿ ಸೋಮೇಶ್ವರ ಭಾಗದಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿ ತಕ್ಷಣಕ್ಕೆ ಬೇಕಾದ ಸುಮಾರು 2.3 ಕಿ.ಮೀ ಭಾಗಕ್ಕೆ ಕಲ್ಲು ಹಾಕಲಾಗಿತ್ತು. ಆದರೆ ಇದಕ್ಕೆ ಸರಕಾರದಿಂದ ಅನುಮೋದನೆ ಸಿಗದೆ ಈ ಮೊತ್ತ ಹಾಗೆಯೇ ಬಾಕಿಯಾಗಿತ್ತು. ಅದಕ್ಕೆ ಅನಂತರದ ವರ್ಷಗಳಲ್ಲಿ ಮೊತ್ತ ಸೇರ್ಪಡೆಯಾಗುತ್ತಲೇ ಹೋಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…