ಜನ ಮನದ ನಾಡಿ ಮಿಡಿತ

Advertisement

ಸ್ವರಾಜ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್..! ಲೋನ್ ಆಪ್ ಕಂಪೆನಿಯಿ0ದ ಬೆದರಿಕೆ ಕರೆ

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಬಾಯತ್ಯಾರು ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು, ಆತ ಲೋನ್ ಆಪ್‌ನಿಂದ ಪಡೆದುಕೊಂಡ ಹಣದಿಂದ ಕಂಪನಿಯ ಬ್ಲಾಕ್ ಮೇಲ್ ಬೆದರಿಕೆಗೆ ಹೆದರಿ ಪ್ರಾಣ ಬಿಟ್ಟಿದ್ದಾನೆ.

ಪುದುವೆಟ್ಟುವಿನ ಸ್ವರಾಜ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.

ಸ್ವರಾಜ್ ಆನ್ ಲೈನ್ ಲೋನ್ ಆಪ್ ಕಂಪನಿಯಿಂದ ಲೋನ್ ಪಡೆದಿದ್ದು, ಹಂತಹಂತವಾಗಿ ಕಂಪನಿ ಹೆಚ್ಚುವರಿ ಹಣ ವಾಪಸ್ ಪಡೆಯಲು ಬೆದರಿಕೆಗಳನ್ನು ಹಾಕುತ್ತಿತ್ತು. ಸ್ವರಾಜ್ ವಾಟ್ಸಪ್ ನಲ್ಲಿ ಅಕ್ಕನ ಮಗಳ ಡಿಪಿ ಫೋಟೋ ಹಾಕಿದ್ದ.‌ ಇದನ್ನೇ ಬಂಡವಾಳ ಮಾಡಿಕೊಂಡ ಆಪ್ ಕಂಪನಿ ವಿದೇಶದ ವಾಟ್ಸಪ್ ನಂಬರಿನಿಂದ ಸ್ನೇಹಿತರಿಗೆ ‘ಮಗು ಮಾರಾಟಕ್ಕಿದೆ’ ಎಂದು ಬರೆದು ವಿದೇಶಿ ನಂಬರ್ ಹಾಕಿ ಸ್ವರಾಜ್ ಸ್ನೇಹಿತರಿಗೆ ಕೆಲ ದಿನಗಳ ಹಿಂದೆ ಶೇರ್ ಮಾಡಿದ್ದರು.ಇನ್ನು ಈ ವಿಷಯವನ್ನು ಸ್ಬರಾಜ್ ಗೆ ಸ್ನೇಹಿತರು ತಿಳಿಸಿದ್ದು, ಆಗಸ್ಟ್ 30 ಕ್ಕೆ ಸ್ವರಾಜ್ ತನ್ನ ಬ್ಯಾಂಕ್ ಖಾತೆಯಿಂದ 30,000 ಸಾವಿರ ಹಣ ಡ್ರಾ ಮಾಡಿ ಆಪ್ ಕಂಪನಿಗೆ ಕಟ್ಟಿದ್ದ‌. ಮತ್ತೆ ಹೆಚ್ಚುವರಿ ಹಣ ನೀಡಲು ಆಪ್ ಕಂಪನಿ ಬೆದರಿಕೆ ಹಾಕುತ್ತಿತ್ತು. ಅದಲ್ಲದೆ ಆಗಸ್ಟ್ 31 ರ ಮಧ್ಯಾಹ್ನ 2 ಗಂಟೆಗೆ ಕೊನೆಯ ಡೆಡ್ ಲೈನ್ ನಿನಗೆ ಎಂದು ಕಂಪನಿ ಸಂದೇಶ ಕಳುಹಿಸಿತ್ತು ಎನ್ನಲಾಗಿದೆ.ಈ ಎಲ್ಲಾ ವಿಚಾರದಿಂದ ನೊಂದಿದ್ದ ಸ್ಬರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!