ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಬಾಯತ್ಯಾರು ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು, ಆತ ಲೋನ್ ಆಪ್ನಿಂದ ಪಡೆದುಕೊಂಡ ಹಣದಿಂದ ಕಂಪನಿಯ ಬ್ಲಾಕ್ ಮೇಲ್ ಬೆದರಿಕೆಗೆ ಹೆದರಿ ಪ್ರಾಣ ಬಿಟ್ಟಿದ್ದಾನೆ.
ಪುದುವೆಟ್ಟುವಿನ ಸ್ವರಾಜ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.
ಸ್ವರಾಜ್ ಆನ್ ಲೈನ್ ಲೋನ್ ಆಪ್ ಕಂಪನಿಯಿಂದ ಲೋನ್ ಪಡೆದಿದ್ದು, ಹಂತಹಂತವಾಗಿ ಕಂಪನಿ ಹೆಚ್ಚುವರಿ ಹಣ ವಾಪಸ್ ಪಡೆಯಲು ಬೆದರಿಕೆಗಳನ್ನು ಹಾಕುತ್ತಿತ್ತು. ಸ್ವರಾಜ್ ವಾಟ್ಸಪ್ ನಲ್ಲಿ ಅಕ್ಕನ ಮಗಳ ಡಿಪಿ ಫೋಟೋ ಹಾಕಿದ್ದ. ಇದನ್ನೇ ಬಂಡವಾಳ ಮಾಡಿಕೊಂಡ ಆಪ್ ಕಂಪನಿ ವಿದೇಶದ ವಾಟ್ಸಪ್ ನಂಬರಿನಿಂದ ಸ್ನೇಹಿತರಿಗೆ ‘ಮಗು ಮಾರಾಟಕ್ಕಿದೆ’ ಎಂದು ಬರೆದು ವಿದೇಶಿ ನಂಬರ್ ಹಾಕಿ ಸ್ವರಾಜ್ ಸ್ನೇಹಿತರಿಗೆ ಕೆಲ ದಿನಗಳ ಹಿಂದೆ ಶೇರ್ ಮಾಡಿದ್ದರು.ಇನ್ನು ಈ ವಿಷಯವನ್ನು ಸ್ಬರಾಜ್ ಗೆ ಸ್ನೇಹಿತರು ತಿಳಿಸಿದ್ದು, ಆಗಸ್ಟ್ 30 ಕ್ಕೆ ಸ್ವರಾಜ್ ತನ್ನ ಬ್ಯಾಂಕ್ ಖಾತೆಯಿಂದ 30,000 ಸಾವಿರ ಹಣ ಡ್ರಾ ಮಾಡಿ ಆಪ್ ಕಂಪನಿಗೆ ಕಟ್ಟಿದ್ದ. ಮತ್ತೆ ಹೆಚ್ಚುವರಿ ಹಣ ನೀಡಲು ಆಪ್ ಕಂಪನಿ ಬೆದರಿಕೆ ಹಾಕುತ್ತಿತ್ತು. ಅದಲ್ಲದೆ ಆಗಸ್ಟ್ 31 ರ ಮಧ್ಯಾಹ್ನ 2 ಗಂಟೆಗೆ ಕೊನೆಯ ಡೆಡ್ ಲೈನ್ ನಿನಗೆ ಎಂದು ಕಂಪನಿ ಸಂದೇಶ ಕಳುಹಿಸಿತ್ತು ಎನ್ನಲಾಗಿದೆ.ಈ ಎಲ್ಲಾ ವಿಚಾರದಿಂದ ನೊಂದಿದ್ದ ಸ್ಬರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…