ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಬಾಯತ್ಯಾರು ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು, ಆತ ಲೋನ್ ಆಪ್ನಿಂದ ಪಡೆದುಕೊಂಡ ಹಣದಿಂದ ಕಂಪನಿಯ ಬ್ಲಾಕ್ ಮೇಲ್ ಬೆದರಿಕೆಗೆ ಹೆದರಿ ಪ್ರಾಣ ಬಿಟ್ಟಿದ್ದಾನೆ.
ಪುದುವೆಟ್ಟುವಿನ ಸ್ವರಾಜ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.
ಸ್ವರಾಜ್ ಆನ್ ಲೈನ್ ಲೋನ್ ಆಪ್ ಕಂಪನಿಯಿಂದ ಲೋನ್ ಪಡೆದಿದ್ದು, ಹಂತಹಂತವಾಗಿ ಕಂಪನಿ ಹೆಚ್ಚುವರಿ ಹಣ ವಾಪಸ್ ಪಡೆಯಲು ಬೆದರಿಕೆಗಳನ್ನು ಹಾಕುತ್ತಿತ್ತು. ಸ್ವರಾಜ್ ವಾಟ್ಸಪ್ ನಲ್ಲಿ ಅಕ್ಕನ ಮಗಳ ಡಿಪಿ ಫೋಟೋ ಹಾಕಿದ್ದ. ಇದನ್ನೇ ಬಂಡವಾಳ ಮಾಡಿಕೊಂಡ ಆಪ್ ಕಂಪನಿ ವಿದೇಶದ ವಾಟ್ಸಪ್ ನಂಬರಿನಿಂದ ಸ್ನೇಹಿತರಿಗೆ ‘ಮಗು ಮಾರಾಟಕ್ಕಿದೆ’ ಎಂದು ಬರೆದು ವಿದೇಶಿ ನಂಬರ್ ಹಾಕಿ ಸ್ವರಾಜ್ ಸ್ನೇಹಿತರಿಗೆ ಕೆಲ ದಿನಗಳ ಹಿಂದೆ ಶೇರ್ ಮಾಡಿದ್ದರು.ಇನ್ನು ಈ ವಿಷಯವನ್ನು ಸ್ಬರಾಜ್ ಗೆ ಸ್ನೇಹಿತರು ತಿಳಿಸಿದ್ದು, ಆಗಸ್ಟ್ 30 ಕ್ಕೆ ಸ್ವರಾಜ್ ತನ್ನ ಬ್ಯಾಂಕ್ ಖಾತೆಯಿಂದ 30,000 ಸಾವಿರ ಹಣ ಡ್ರಾ ಮಾಡಿ ಆಪ್ ಕಂಪನಿಗೆ ಕಟ್ಟಿದ್ದ. ಮತ್ತೆ ಹೆಚ್ಚುವರಿ ಹಣ ನೀಡಲು ಆಪ್ ಕಂಪನಿ ಬೆದರಿಕೆ ಹಾಕುತ್ತಿತ್ತು. ಅದಲ್ಲದೆ ಆಗಸ್ಟ್ 31 ರ ಮಧ್ಯಾಹ್ನ 2 ಗಂಟೆಗೆ ಕೊನೆಯ ಡೆಡ್ ಲೈನ್ ನಿನಗೆ ಎಂದು ಕಂಪನಿ ಸಂದೇಶ ಕಳುಹಿಸಿತ್ತು ಎನ್ನಲಾಗಿದೆ.ಈ ಎಲ್ಲಾ ವಿಚಾರದಿಂದ ನೊಂದಿದ್ದ ಸ್ಬರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…