ಉಡುಪಿ ಲೋಕಾಯುಕ್ತ ಪೊಲೀಸರು ಅಜೆಕಾರ್ ನಾಡಕಚೇರಿ ಕಚೇರಿ ಮೇಲೆ ಗುರುವಾರ ದಾಳಿ ನಡೆಸಿ ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಒಂದನೇ ವಿಭಾಗದ ಗುಮಾಸ್ತನನ್ನು ಬಂಧಿಸಿದ್ದಾರೆ.
ಕಚೇರಿಯ ಒಂದನೇ ವಿಭಾಗದ ಗುಮಾಸ್ತ ನಿಜಾಮುದ್ದೀನ್ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ. ಕುಟುಂಬದ ನಕ್ಷೆ ತಯಾರಿಸಲು ಹಿರ್ಗಾನಾ ಮೂಲದ ವ್ಯಕ್ತಿಯಿಂದ 5000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ದೂರುದಾರರು ಮೊದಲ ಕಂತಾಗಿ 4000 ರೂಪಾಯಿ ನೀಡಿ ಲೋಕಾಯುಕ್ತರಿಗೆ ವಿಷಯ ತಿಳಿಸಿದ್ದಾರೆ. ಅದರಂತೆ ನಿಜಾಮುದ್ದೀನ್ ಎರಡನೇ ಕಂತಾಗಿ 1000 ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ನಿಜಾಮುದ್ದೀನ್ ಕಳೆದ 15 ವರ್ಷಗಳಿಂದ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್ಪಿ ಸೈಮನ್, ಡಿವೈಎಸ್ಪಿ ಕೆ.ಸಿ.ಪ್ರಕಾಶ್, ಪಿಐ ರಫೀಕ್, ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ಮಲ್ಲಿಕಾ, ಸತೀಶ್, ಅಬ್ದುಲ್, ರವೀಂದ್ರ, ಸೂರಜ್ ಭಾಗವಹಿಸಿದ್ದರು.
ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ…
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…