ಜನ ಮನದ ನಾಡಿ ಮಿಡಿತ

Advertisement

ಮಣಿಪುರದಲ್ಲಿ ಮತ್ತೇ ಭುಗಿಲೆದ್ದ ಹಿಂಸಾಚಾರ; 8 ಮಂದಿ ಸಾವು

ಮಣಿಪುರದ ಬಿಷ್ಣುಪುರ್​ ಮತ್ತು ಚುರಾಚಂದ್​ಪುರ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ​ ಮತ್ತು ಮೈತೇಯಿ​ ನಡುವೆ ಈ ಗುಂಡಿನ ಚಕಮಕಿ ನಡೆದಿದೆ. ಪರಿಣಾಮ 8 ಮಂದಿ ಸಾವನ್ನಪ್ಪಿದರೆ 18 ಮಂದಿಗೆ ಗಾಯವಾಗಿದೆ.

ಆಗಸ್ಟ್​ 29ರಂದು ನಡೆದ ಗುಂಡಿನ ಕಾಳಗದಲ್ಲಿ ಖೋರೆಂಟಾಕ್​ ಪ್ರದೇಶದಲ್ಲಿ 30 ವರ್ಷದ ಗ್ರಾಮ ಸಯಂಸೇವಕನನ್ನು ಹತ್ಯೆ ಮಾಡಲಾಗಿದೆ. ನಂತರ ನಡೆದ ಗುಂಡಿನ ದಾಳಿಗೆ ಒಟ್ಟು 8 ಜನರು ಅಸುನೀಗಿದ್ದಾರೆ.

ಮಣಿಪುರದಲ್ಲಿ ಮೇ 3 ರಂದು ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತು. ಈ ಘಟನೆಯಲ್ಲಿ ಸುಮಾರು 160ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಅಂದಹಾಗೆಯೇ ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮಿಟಿಸ್​​ ಸಮುದಾಯ ಬೇಡಿಕೆ ವಿರುದ್ಧ ಕುಕಿ​​ ಸಮುದಾಯ ಮೆರವಣಿಗೆ ಆಯೋಜಿಸಿತ್ತು. ಅಲ್ಲಿಂದ ಈ ಜನಾಂಗೀಯ ನಿಂದನೆಯ ಘರ್ಷಣೆ ಪ್ರಾರಂಭವಾಗಿದೆ.

ಇನ್ನು ಮಣಿಪುರದಲ್ಲಿ 53 ಪ್ರತಿಶತದಷ್ಟು ಮೈತೇಯಿ​ ಜನಾಂಗಗಳು ವಾಸಿಸುತ್ತಿದ್ದಾರೆ. ಶೇ.40ರಷ್ಟು ಕುಕಿ​ ಮತ್ತು ನಾಗಾ ಜನಾಂಗದವರರು ಇದ್ದು, ಗುಡ್ಡಗಾಡಿನಲ್ಲಿ ವಾಸಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!