ಮಣಿಪುರದ ಬಿಷ್ಣುಪುರ್ ಮತ್ತು ಚುರಾಚಂದ್ಪುರ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ ಮತ್ತು ಮೈತೇಯಿ ನಡುವೆ ಈ ಗುಂಡಿನ ಚಕಮಕಿ ನಡೆದಿದೆ. ಪರಿಣಾಮ 8 ಮಂದಿ ಸಾವನ್ನಪ್ಪಿದರೆ 18 ಮಂದಿಗೆ ಗಾಯವಾಗಿದೆ.
ಆಗಸ್ಟ್ 29ರಂದು ನಡೆದ ಗುಂಡಿನ ಕಾಳಗದಲ್ಲಿ ಖೋರೆಂಟಾಕ್ ಪ್ರದೇಶದಲ್ಲಿ 30 ವರ್ಷದ ಗ್ರಾಮ ಸಯಂಸೇವಕನನ್ನು ಹತ್ಯೆ ಮಾಡಲಾಗಿದೆ. ನಂತರ ನಡೆದ ಗುಂಡಿನ ದಾಳಿಗೆ ಒಟ್ಟು 8 ಜನರು ಅಸುನೀಗಿದ್ದಾರೆ.
ಮಣಿಪುರದಲ್ಲಿ ಮೇ 3 ರಂದು ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತು. ಈ ಘಟನೆಯಲ್ಲಿ ಸುಮಾರು 160ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಅಂದಹಾಗೆಯೇ ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮಿಟಿಸ್ ಸಮುದಾಯ ಬೇಡಿಕೆ ವಿರುದ್ಧ ಕುಕಿ ಸಮುದಾಯ ಮೆರವಣಿಗೆ ಆಯೋಜಿಸಿತ್ತು. ಅಲ್ಲಿಂದ ಈ ಜನಾಂಗೀಯ ನಿಂದನೆಯ ಘರ್ಷಣೆ ಪ್ರಾರಂಭವಾಗಿದೆ.
ಇನ್ನು ಮಣಿಪುರದಲ್ಲಿ 53 ಪ್ರತಿಶತದಷ್ಟು ಮೈತೇಯಿ ಜನಾಂಗಗಳು ವಾಸಿಸುತ್ತಿದ್ದಾರೆ. ಶೇ.40ರಷ್ಟು ಕುಕಿ ಮತ್ತು ನಾಗಾ ಜನಾಂಗದವರರು ಇದ್ದು, ಗುಡ್ಡಗಾಡಿನಲ್ಲಿ ವಾಸಿಸುತ್ತಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…