ಮಣಿಪುರದ ಬಿಷ್ಣುಪುರ್ ಮತ್ತು ಚುರಾಚಂದ್ಪುರ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ ಮತ್ತು ಮೈತೇಯಿ ನಡುವೆ ಈ ಗುಂಡಿನ ಚಕಮಕಿ ನಡೆದಿದೆ. ಪರಿಣಾಮ 8 ಮಂದಿ ಸಾವನ್ನಪ್ಪಿದರೆ 18 ಮಂದಿಗೆ ಗಾಯವಾಗಿದೆ.
ಆಗಸ್ಟ್ 29ರಂದು ನಡೆದ ಗುಂಡಿನ ಕಾಳಗದಲ್ಲಿ ಖೋರೆಂಟಾಕ್ ಪ್ರದೇಶದಲ್ಲಿ 30 ವರ್ಷದ ಗ್ರಾಮ ಸಯಂಸೇವಕನನ್ನು ಹತ್ಯೆ ಮಾಡಲಾಗಿದೆ. ನಂತರ ನಡೆದ ಗುಂಡಿನ ದಾಳಿಗೆ ಒಟ್ಟು 8 ಜನರು ಅಸುನೀಗಿದ್ದಾರೆ.
ಮಣಿಪುರದಲ್ಲಿ ಮೇ 3 ರಂದು ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತು. ಈ ಘಟನೆಯಲ್ಲಿ ಸುಮಾರು 160ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಅಂದಹಾಗೆಯೇ ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮಿಟಿಸ್ ಸಮುದಾಯ ಬೇಡಿಕೆ ವಿರುದ್ಧ ಕುಕಿ ಸಮುದಾಯ ಮೆರವಣಿಗೆ ಆಯೋಜಿಸಿತ್ತು. ಅಲ್ಲಿಂದ ಈ ಜನಾಂಗೀಯ ನಿಂದನೆಯ ಘರ್ಷಣೆ ಪ್ರಾರಂಭವಾಗಿದೆ.
ಇನ್ನು ಮಣಿಪುರದಲ್ಲಿ 53 ಪ್ರತಿಶತದಷ್ಟು ಮೈತೇಯಿ ಜನಾಂಗಗಳು ವಾಸಿಸುತ್ತಿದ್ದಾರೆ. ಶೇ.40ರಷ್ಟು ಕುಕಿ ಮತ್ತು ನಾಗಾ ಜನಾಂಗದವರರು ಇದ್ದು, ಗುಡ್ಡಗಾಡಿನಲ್ಲಿ ವಾಸಿಸುತ್ತಿದ್ದಾರೆ.
ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ…
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…