ಮಣಿಪುರದ ಬಿಷ್ಣುಪುರ್ ಮತ್ತು ಚುರಾಚಂದ್ಪುರ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ ಮತ್ತು ಮೈತೇಯಿ ನಡುವೆ ಈ ಗುಂಡಿನ ಚಕಮಕಿ ನಡೆದಿದೆ. ಪರಿಣಾಮ 8 ಮಂದಿ ಸಾವನ್ನಪ್ಪಿದರೆ 18 ಮಂದಿಗೆ ಗಾಯವಾಗಿದೆ.
ಆಗಸ್ಟ್ 29ರಂದು ನಡೆದ ಗುಂಡಿನ ಕಾಳಗದಲ್ಲಿ ಖೋರೆಂಟಾಕ್ ಪ್ರದೇಶದಲ್ಲಿ 30 ವರ್ಷದ ಗ್ರಾಮ ಸಯಂಸೇವಕನನ್ನು ಹತ್ಯೆ ಮಾಡಲಾಗಿದೆ. ನಂತರ ನಡೆದ ಗುಂಡಿನ ದಾಳಿಗೆ ಒಟ್ಟು 8 ಜನರು ಅಸುನೀಗಿದ್ದಾರೆ.
ಮಣಿಪುರದಲ್ಲಿ ಮೇ 3 ರಂದು ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತು. ಈ ಘಟನೆಯಲ್ಲಿ ಸುಮಾರು 160ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಅಂದಹಾಗೆಯೇ ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮಿಟಿಸ್ ಸಮುದಾಯ ಬೇಡಿಕೆ ವಿರುದ್ಧ ಕುಕಿ ಸಮುದಾಯ ಮೆರವಣಿಗೆ ಆಯೋಜಿಸಿತ್ತು. ಅಲ್ಲಿಂದ ಈ ಜನಾಂಗೀಯ ನಿಂದನೆಯ ಘರ್ಷಣೆ ಪ್ರಾರಂಭವಾಗಿದೆ.
ಇನ್ನು ಮಣಿಪುರದಲ್ಲಿ 53 ಪ್ರತಿಶತದಷ್ಟು ಮೈತೇಯಿ ಜನಾಂಗಗಳು ವಾಸಿಸುತ್ತಿದ್ದಾರೆ. ಶೇ.40ರಷ್ಟು ಕುಕಿ ಮತ್ತು ನಾಗಾ ಜನಾಂಗದವರರು ಇದ್ದು, ಗುಡ್ಡಗಾಡಿನಲ್ಲಿ ವಾಸಿಸುತ್ತಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…