ಜನ ಮನದ ನಾಡಿ ಮಿಡಿತ

Advertisement

ಅಯ್ಯೋ..! ಆಸ್ತಿಗಾಗಿ 5 ತಿಂಗಳ ಹಸುಕೂಸಿನ ಕೊಲೆ

ಐದು ತಿಂಗಳ ಹಸುಗೂಸಿಗೆ ಮಲತಾಯಿ ಹಾಲಿನಲ್ಲಿ ವಿಷ ಬೆರೆಸಿ ಸಾಯಿಸಿರೋ ಆರೋಪ ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ.


ಸಂಗೀತಾ ಚೆಟ್ಟಿಗೇರಿ ಸಾವನ್ನಪ್ಪಿದ ಐದು ತಿಂಗಳ ಹಸುಕೂಸು.


ಮನೆಯಲ್ಲಿ ಹಸುಗೂಸು ಸಂಗೀತಾಳಿಗೆ ತಾಯಿ ಶ್ರೀದೇವಿ ಹಾಲು ಕುಡಿಸುತ್ತಾ ಇರ್ತಾರೆ. ಆಗ ಒತ್ತಾಯ ಪೂರ್ವಕವಾಗಿ ಆರೋಪಿ ದೇವಮ್ಮ ಹಾಲುಣಿಸುತ್ತೇನೆ ಅಂತಾ ಕರೆದುಕೊಂಡು ಹೋಗಿದ್ದಾರೆ. ಮನೆಯ ರೂಮಿಗೆ ಹೋಗಿ ಡೋರ್ ಮುಚ್ಚಿಕೊಂಡಿದ್ದಾರೆ. ಆಗ ಹಾಲಿನ ಬಾಟಲ್‌ನಲ್ಲಿ ವಿಷ ಬೆರೆಸಿ ಕೂಸಿಗೆ ಹಾಲು ಕೂಡಿಸಿದ್ದಾರೆ ಎನ್ನಲಾಗಿದೆ.ವಿಷ ಬೆರೆಸಿದ ಹಾಲು ಕುಡಿದ ಮೂರು ಗಂಟೆ ನಂತರ ಹಸುಗೂಸಿನ ಬಾಯಲ್ಲಿ ನೊರೆ ಬಂದಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಂಗೀತಾ ಚೆಟ್ಟಿಗೇರಿ ಸಾವನ್ನಪ್ಪಿದ್ದಾಳೆ. ಕಳೆದ ಆಗಸ್ಟ್ 30ರಂದು ಬಬಲಾದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿ ದೇವಮ್ಮಳನ್ನು ವಡಗೇರಾ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.


ಬಬಲಾದ ಗ್ರಾಮದ ಸಿದ್ದಪ್ಪ ಚೆಟ್ಟಿಗೇರಿ 11 ವರ್ಷಗಳ ಹಿಂದೆ ಶ್ರೀದೇವಿ ಎಂಬಾಕೆಯನ್ನು ಮದುವೆಯಾಗಿದ್ದ. ಶ್ರೀದೇವಿಗೆ ಮಕ್ಕಳಾಗದ ಹಿನ್ನೆಲೆ ಕಳೆದ 7 ವರ್ಷದ ಹಿಂದೆ ದೇವಮ್ಮಳನ್ನು ಮದುವೆಯಾಗಿದ್ದಾನೆ. ದೇವಮ್ಮಳನ್ನ ಮದುವೆಯಾದ ನಂತರ ಶ್ರೀದೇವಿ ಗಂಡನ ಮನೆ ಬಿಟ್ಟು ತನ್ನ ತವರು ಮನೆಗೆ ಹೋಗಿದ್ದಾಳೆ. ಹಿರಿಯರ ರಾಜಿ ಸಂಧಾನದ ನಂತರ ಕಳೆದ ಮೂರು ವರ್ಷಗಳ ಹಿಂದೆ ಗಂಡನ ಮನೆಗೆ ವಾಪಸ್ ಆಗಿದ್ದಳು. ಕಳೆದ ಐದು ತಿಂಗಳ ಹಿಂದೆ ಶ್ರೀದೇವಿಗೆ ಹೆಣ್ಣು ಮಗು ಜನಿಸಿದೆ. ಆರೋಪಿ ದೇವಮ್ಮಳಿಗೆ ನಾಲ್ಕು ಜನ ಮಕ್ಕಳಿದ್ದಾರೆ. ಹೀಗಾಗಿ ಆಸ್ತಿಯಲ್ಲಿ ಸವತಿ ಶ್ರೀದೇವಿ ಐದು ತಿಂಗಳ ಮಗಳು ಸಂಗೀತಾಗೆ ಪಾಲು ಹೋಗುತ್ತೆ ಅಂತಾ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

Leave a Reply

Your email address will not be published. Required fields are marked *

ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ.

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

error: Content is protected !!