ಜನ ಮನದ ನಾಡಿ ಮಿಡಿತ

Advertisement

ಅಯ್ಯೋ..! ಆಸ್ತಿಗಾಗಿ 5 ತಿಂಗಳ ಹಸುಕೂಸಿನ ಕೊಲೆ

ಐದು ತಿಂಗಳ ಹಸುಗೂಸಿಗೆ ಮಲತಾಯಿ ಹಾಲಿನಲ್ಲಿ ವಿಷ ಬೆರೆಸಿ ಸಾಯಿಸಿರೋ ಆರೋಪ ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ.


ಸಂಗೀತಾ ಚೆಟ್ಟಿಗೇರಿ ಸಾವನ್ನಪ್ಪಿದ ಐದು ತಿಂಗಳ ಹಸುಕೂಸು.


ಮನೆಯಲ್ಲಿ ಹಸುಗೂಸು ಸಂಗೀತಾಳಿಗೆ ತಾಯಿ ಶ್ರೀದೇವಿ ಹಾಲು ಕುಡಿಸುತ್ತಾ ಇರ್ತಾರೆ. ಆಗ ಒತ್ತಾಯ ಪೂರ್ವಕವಾಗಿ ಆರೋಪಿ ದೇವಮ್ಮ ಹಾಲುಣಿಸುತ್ತೇನೆ ಅಂತಾ ಕರೆದುಕೊಂಡು ಹೋಗಿದ್ದಾರೆ. ಮನೆಯ ರೂಮಿಗೆ ಹೋಗಿ ಡೋರ್ ಮುಚ್ಚಿಕೊಂಡಿದ್ದಾರೆ. ಆಗ ಹಾಲಿನ ಬಾಟಲ್‌ನಲ್ಲಿ ವಿಷ ಬೆರೆಸಿ ಕೂಸಿಗೆ ಹಾಲು ಕೂಡಿಸಿದ್ದಾರೆ ಎನ್ನಲಾಗಿದೆ.ವಿಷ ಬೆರೆಸಿದ ಹಾಲು ಕುಡಿದ ಮೂರು ಗಂಟೆ ನಂತರ ಹಸುಗೂಸಿನ ಬಾಯಲ್ಲಿ ನೊರೆ ಬಂದಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಂಗೀತಾ ಚೆಟ್ಟಿಗೇರಿ ಸಾವನ್ನಪ್ಪಿದ್ದಾಳೆ. ಕಳೆದ ಆಗಸ್ಟ್ 30ರಂದು ಬಬಲಾದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿ ದೇವಮ್ಮಳನ್ನು ವಡಗೇರಾ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.


ಬಬಲಾದ ಗ್ರಾಮದ ಸಿದ್ದಪ್ಪ ಚೆಟ್ಟಿಗೇರಿ 11 ವರ್ಷಗಳ ಹಿಂದೆ ಶ್ರೀದೇವಿ ಎಂಬಾಕೆಯನ್ನು ಮದುವೆಯಾಗಿದ್ದ. ಶ್ರೀದೇವಿಗೆ ಮಕ್ಕಳಾಗದ ಹಿನ್ನೆಲೆ ಕಳೆದ 7 ವರ್ಷದ ಹಿಂದೆ ದೇವಮ್ಮಳನ್ನು ಮದುವೆಯಾಗಿದ್ದಾನೆ. ದೇವಮ್ಮಳನ್ನ ಮದುವೆಯಾದ ನಂತರ ಶ್ರೀದೇವಿ ಗಂಡನ ಮನೆ ಬಿಟ್ಟು ತನ್ನ ತವರು ಮನೆಗೆ ಹೋಗಿದ್ದಾಳೆ. ಹಿರಿಯರ ರಾಜಿ ಸಂಧಾನದ ನಂತರ ಕಳೆದ ಮೂರು ವರ್ಷಗಳ ಹಿಂದೆ ಗಂಡನ ಮನೆಗೆ ವಾಪಸ್ ಆಗಿದ್ದಳು. ಕಳೆದ ಐದು ತಿಂಗಳ ಹಿಂದೆ ಶ್ರೀದೇವಿಗೆ ಹೆಣ್ಣು ಮಗು ಜನಿಸಿದೆ. ಆರೋಪಿ ದೇವಮ್ಮಳಿಗೆ ನಾಲ್ಕು ಜನ ಮಕ್ಕಳಿದ್ದಾರೆ. ಹೀಗಾಗಿ ಆಸ್ತಿಯಲ್ಲಿ ಸವತಿ ಶ್ರೀದೇವಿ ಐದು ತಿಂಗಳ ಮಗಳು ಸಂಗೀತಾಗೆ ಪಾಲು ಹೋಗುತ್ತೆ ಅಂತಾ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!