ಜನ ಮನದ ನಾಡಿ ಮಿಡಿತ

Advertisement

ಅಯ್ಯೋ..! ಆಸ್ತಿಗಾಗಿ 5 ತಿಂಗಳ ಹಸುಕೂಸಿನ ಕೊಲೆ

ಐದು ತಿಂಗಳ ಹಸುಗೂಸಿಗೆ ಮಲತಾಯಿ ಹಾಲಿನಲ್ಲಿ ವಿಷ ಬೆರೆಸಿ ಸಾಯಿಸಿರೋ ಆರೋಪ ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ.


ಸಂಗೀತಾ ಚೆಟ್ಟಿಗೇರಿ ಸಾವನ್ನಪ್ಪಿದ ಐದು ತಿಂಗಳ ಹಸುಕೂಸು.


ಮನೆಯಲ್ಲಿ ಹಸುಗೂಸು ಸಂಗೀತಾಳಿಗೆ ತಾಯಿ ಶ್ರೀದೇವಿ ಹಾಲು ಕುಡಿಸುತ್ತಾ ಇರ್ತಾರೆ. ಆಗ ಒತ್ತಾಯ ಪೂರ್ವಕವಾಗಿ ಆರೋಪಿ ದೇವಮ್ಮ ಹಾಲುಣಿಸುತ್ತೇನೆ ಅಂತಾ ಕರೆದುಕೊಂಡು ಹೋಗಿದ್ದಾರೆ. ಮನೆಯ ರೂಮಿಗೆ ಹೋಗಿ ಡೋರ್ ಮುಚ್ಚಿಕೊಂಡಿದ್ದಾರೆ. ಆಗ ಹಾಲಿನ ಬಾಟಲ್‌ನಲ್ಲಿ ವಿಷ ಬೆರೆಸಿ ಕೂಸಿಗೆ ಹಾಲು ಕೂಡಿಸಿದ್ದಾರೆ ಎನ್ನಲಾಗಿದೆ.ವಿಷ ಬೆರೆಸಿದ ಹಾಲು ಕುಡಿದ ಮೂರು ಗಂಟೆ ನಂತರ ಹಸುಗೂಸಿನ ಬಾಯಲ್ಲಿ ನೊರೆ ಬಂದಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಂಗೀತಾ ಚೆಟ್ಟಿಗೇರಿ ಸಾವನ್ನಪ್ಪಿದ್ದಾಳೆ. ಕಳೆದ ಆಗಸ್ಟ್ 30ರಂದು ಬಬಲಾದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿ ದೇವಮ್ಮಳನ್ನು ವಡಗೇರಾ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.


ಬಬಲಾದ ಗ್ರಾಮದ ಸಿದ್ದಪ್ಪ ಚೆಟ್ಟಿಗೇರಿ 11 ವರ್ಷಗಳ ಹಿಂದೆ ಶ್ರೀದೇವಿ ಎಂಬಾಕೆಯನ್ನು ಮದುವೆಯಾಗಿದ್ದ. ಶ್ರೀದೇವಿಗೆ ಮಕ್ಕಳಾಗದ ಹಿನ್ನೆಲೆ ಕಳೆದ 7 ವರ್ಷದ ಹಿಂದೆ ದೇವಮ್ಮಳನ್ನು ಮದುವೆಯಾಗಿದ್ದಾನೆ. ದೇವಮ್ಮಳನ್ನ ಮದುವೆಯಾದ ನಂತರ ಶ್ರೀದೇವಿ ಗಂಡನ ಮನೆ ಬಿಟ್ಟು ತನ್ನ ತವರು ಮನೆಗೆ ಹೋಗಿದ್ದಾಳೆ. ಹಿರಿಯರ ರಾಜಿ ಸಂಧಾನದ ನಂತರ ಕಳೆದ ಮೂರು ವರ್ಷಗಳ ಹಿಂದೆ ಗಂಡನ ಮನೆಗೆ ವಾಪಸ್ ಆಗಿದ್ದಳು. ಕಳೆದ ಐದು ತಿಂಗಳ ಹಿಂದೆ ಶ್ರೀದೇವಿಗೆ ಹೆಣ್ಣು ಮಗು ಜನಿಸಿದೆ. ಆರೋಪಿ ದೇವಮ್ಮಳಿಗೆ ನಾಲ್ಕು ಜನ ಮಕ್ಕಳಿದ್ದಾರೆ. ಹೀಗಾಗಿ ಆಸ್ತಿಯಲ್ಲಿ ಸವತಿ ಶ್ರೀದೇವಿ ಐದು ತಿಂಗಳ ಮಗಳು ಸಂಗೀತಾಗೆ ಪಾಲು ಹೋಗುತ್ತೆ ಅಂತಾ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!