ಐದು ತಿಂಗಳ ಹಸುಗೂಸಿಗೆ ಮಲತಾಯಿ ಹಾಲಿನಲ್ಲಿ ವಿಷ ಬೆರೆಸಿ ಸಾಯಿಸಿರೋ ಆರೋಪ ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ.
ಸಂಗೀತಾ ಚೆಟ್ಟಿಗೇರಿ ಸಾವನ್ನಪ್ಪಿದ ಐದು ತಿಂಗಳ ಹಸುಕೂಸು.
ಮನೆಯಲ್ಲಿ ಹಸುಗೂಸು ಸಂಗೀತಾಳಿಗೆ ತಾಯಿ ಶ್ರೀದೇವಿ ಹಾಲು ಕುಡಿಸುತ್ತಾ ಇರ್ತಾರೆ. ಆಗ ಒತ್ತಾಯ ಪೂರ್ವಕವಾಗಿ ಆರೋಪಿ ದೇವಮ್ಮ ಹಾಲುಣಿಸುತ್ತೇನೆ ಅಂತಾ ಕರೆದುಕೊಂಡು ಹೋಗಿದ್ದಾರೆ. ಮನೆಯ ರೂಮಿಗೆ ಹೋಗಿ ಡೋರ್ ಮುಚ್ಚಿಕೊಂಡಿದ್ದಾರೆ. ಆಗ ಹಾಲಿನ ಬಾಟಲ್ನಲ್ಲಿ ವಿಷ ಬೆರೆಸಿ ಕೂಸಿಗೆ ಹಾಲು ಕೂಡಿಸಿದ್ದಾರೆ ಎನ್ನಲಾಗಿದೆ.ವಿಷ ಬೆರೆಸಿದ ಹಾಲು ಕುಡಿದ ಮೂರು ಗಂಟೆ ನಂತರ ಹಸುಗೂಸಿನ ಬಾಯಲ್ಲಿ ನೊರೆ ಬಂದಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಂಗೀತಾ ಚೆಟ್ಟಿಗೇರಿ ಸಾವನ್ನಪ್ಪಿದ್ದಾಳೆ. ಕಳೆದ ಆಗಸ್ಟ್ 30ರಂದು ಬಬಲಾದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿ ದೇವಮ್ಮಳನ್ನು ವಡಗೇರಾ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಬಬಲಾದ ಗ್ರಾಮದ ಸಿದ್ದಪ್ಪ ಚೆಟ್ಟಿಗೇರಿ 11 ವರ್ಷಗಳ ಹಿಂದೆ ಶ್ರೀದೇವಿ ಎಂಬಾಕೆಯನ್ನು ಮದುವೆಯಾಗಿದ್ದ. ಶ್ರೀದೇವಿಗೆ ಮಕ್ಕಳಾಗದ ಹಿನ್ನೆಲೆ ಕಳೆದ 7 ವರ್ಷದ ಹಿಂದೆ ದೇವಮ್ಮಳನ್ನು ಮದುವೆಯಾಗಿದ್ದಾನೆ. ದೇವಮ್ಮಳನ್ನ ಮದುವೆಯಾದ ನಂತರ ಶ್ರೀದೇವಿ ಗಂಡನ ಮನೆ ಬಿಟ್ಟು ತನ್ನ ತವರು ಮನೆಗೆ ಹೋಗಿದ್ದಾಳೆ. ಹಿರಿಯರ ರಾಜಿ ಸಂಧಾನದ ನಂತರ ಕಳೆದ ಮೂರು ವರ್ಷಗಳ ಹಿಂದೆ ಗಂಡನ ಮನೆಗೆ ವಾಪಸ್ ಆಗಿದ್ದಳು. ಕಳೆದ ಐದು ತಿಂಗಳ ಹಿಂದೆ ಶ್ರೀದೇವಿಗೆ ಹೆಣ್ಣು ಮಗು ಜನಿಸಿದೆ. ಆರೋಪಿ ದೇವಮ್ಮಳಿಗೆ ನಾಲ್ಕು ಜನ ಮಕ್ಕಳಿದ್ದಾರೆ. ಹೀಗಾಗಿ ಆಸ್ತಿಯಲ್ಲಿ ಸವತಿ ಶ್ರೀದೇವಿ ಐದು ತಿಂಗಳ ಮಗಳು ಸಂಗೀತಾಗೆ ಪಾಲು ಹೋಗುತ್ತೆ ಅಂತಾ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…