ಜನ ಮನದ ನಾಡಿ ಮಿಡಿತ

Advertisement

ಸೆ.02 ರಿಂದ ಸೆ.06 ರ ವರೆಗೆ ಆಳ್ವಾಸ್ ನಲ್ಲಿ ನಾಯಿಮರಿ ನಾಟಕ ಪ್ರದರ್ಶನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸೆ.02 ರಿಂದ ಸೆ.06 ರ ವರೆಗೆ ವಿದ್ಯಾಗಿರಿಯ ಕೃಷಿ ಸಿರಿ ವೇದಿಕೆಯಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸುವ, ಡಾ| ಜೀವನ್ ರಾಂ ಸುಳ್ಯ ನಿರ್ದೇಶನದ ನಾಯಿಮರಿ ನಾಟಕದ ಪ್ರದರ್ಶನವನ್ನು ಏರ್ಪಡಿಸಲಾಗಿದೆ.


ಶ್ರೀಮತಿ ವೈದೇಹಿ ರಚಿಸಿರುವ ಈ ನಾಟಕವು ಈಗಾಗಲೇ ರಾಜ್ಯದ ಅನೇಕ ಕಡೆಗಳಲ್ಲಿ ಯಶಸ್ವೀ ಪ್ರದರ್ಶನಗೊಂಡ ಅತ್ಯುತ್ತಮ ಮಕ್ಕಳ ನಾಟಕವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.


ಸರಳವಾದ ಅಷ್ಟೇ ರಂಜನೀಯ ಅಂಶಗಳಿಂದ ಕೂಡಿದ ಈ ನಾಯಿಮರಿ ನಾಟಕವು ಸಮರ್ಥ ನಿರ್ದೇಶನ, ನವಿರು ಹಾಸ್ಯ, ಪರಿಣಾಮಕಾರಿ ಅಭಿನಯ, ಸುಶ್ರಾವ್ಯ ಸಂಗೀತ, ಉತ್ತಮ ರಂಗ ಸಜ್ಜಿಕೆ ಮತ್ತು ಬೆಳಕು ಸಂಯೋಜನೆಯೊಂದಿಗೆ ಪ್ರೇಕ್ಷಕರನ್ನು ಪ್ರತಿಕ್ಷಣವೂ ಹಿಡಿದಿಟ್ಟುಕೊಳ್ಳುವ ಪ್ರಯೋಗವಾಗಿದೆ.
ಪ್ರತಿ ದಿನ ನಾಟಕವು ಸಂಜೆ 6.45 ಕ್ಕೇ ಆರಂಭವಾಗಲಿದ್ದು, ನಾಟಕ ನೋಡಲು
ಪ್ರವೇಶ ಉಚಿತವಾಗಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!