ಮಲ್ಪೆ : ವಿಷಾನಿಲ ಸೋರಿಕೆಯಾಗಿ ಬೋಟ್ನಲ್ಲಿ ಕೆಲಸ ಮಾಡುತ್ತಿದ್ದ ಮೀನುಗಾರರು ಕಳೆದ ಎರಡು ದಿನಗಳಿಂದ ಬೋಟ್ ಶೇಖರಣೆಯಿಂದ ಮೀನುಗಳನ್ನು ಇಳಿಸುವಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ವರದಿಯಾಗುತ್ತಿದೆ. ಇದೀಗ ಮಲ್ಪೆ ಬಂದರ್ನಿಂದ ಮತ್ತೊಂದು ಘಟನೆ ವರದಿಯಾಗಿದೆ.
ಈಶ್ವರ ಮಲ್ಪೆ ಎರಡೇ ದಿನಗಳಲ್ಲಿ ನಾಲ್ವರ ಪ್ರಾಣ ಉಳಿಸಿದ್ದಾರೆ. ಇದೇ ಘಟನೆ ಶನಿವಾರ ಮಲ್ಪೆ ಬಂದರ್ನಲ್ಲಿ ವರದಿಯಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಯುವಕರನ್ನು ರಕ್ಷಿಸಲು ಈಶ್ವರ ಮಲ್ಪೆ ದೋಣಿಯ ಸಂಗ್ರಹಕ್ಕೆ ಇಳಿದಿದ್ದರು. ವಿಷಾನಿಲ ಸೋರಿಕೆಯಿಂದಾಗಿ ಈಶ್ವರ ಮಲ್ಪೆ ಕೂಡ ಪ್ರಜ್ಞೆ ತಪ್ಪಿದ್ದರು. ಬಳಿಕ ಉಳಿದವರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು.
ಈಶ್ವರ ಮಲ್ಪೆ ಅಸ್ವಸ್ಥಗೊಂಡರೂ ಯುವಕರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವಕರನ್ನು ರಕ್ಷಿಸುವ ಈ ಕಾರ್ಯದಲ್ಲಿ ಈಶ್ವರ ಮಲ್ಪೆ ಮತ್ತು ತಂಡದವರು ಯಶಸ್ವಿಯಾಗಿದ್ದಾರೆ.ಈಶ್ವರ ಮಲ್ಪೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ.ಮಲ್ಪೆ ಬಂದರ್ನಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಈಶ್ವರ ಮಲ್ಪೆ ಮನವಿ ಮಾಡಿದ್ದಾರೆ.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…