ವಿಜ್ಞಾನಿ ವಲಮರ್ತಿ ಚಂದ್ರಯಾನ -3ರ ಉಡಾವಣೆಯ ದ್ವನಿಯಾಗಿದ್ದರು. ಹೃದಯಾ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ವಲಮರ್ತಿ ಅವರು ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ತಮ್ಮ ಕೊನೆಯ ದಿನಗಳಲ್ಲಿ ಚಂದ್ರಯಾನ 3 ಯಶಸ್ಸಿನಲ್ಲಿ ಭಾಗಿಯಾಗಿದ್ದರು. ರಾಕೆಟ್ ಲಾಂಚಿಂಗ್ ಸಂದರ್ಭದಲ್ಲಿ ಇವರು ನೀಡುವ ಕೌಂಟ್ ಡೌನ್ ಬಹಳ ಪ್ರಾಮುಖ್ಯದ್ದಾಗಿದೆ.
ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಇಸ್ರೋದ ಮಾಜಿ ನಿರ್ದೇಶಕ ಡಾ.ಪಿ.ವಿ.ವೆಂಕಟಕೃಷ್ಣನ್, “ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಕಾರ್ಯಾಚರಣೆಗಳ ಕ್ಷಣಗಣನೆಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ -3 ಅವರ ಅಂತಿಮ ಕ್ಷಣಗಣನೆ ಪ್ರಕಟಣೆಯಾಗಿತ್ತು. ಅನಿರೀಕ್ಷಿತ ಅಗಲಿಕೆಯಿಂದ ದುಃಖವಾಗುತ್ತಿದೆ. ಪ್ರಣಾಮಗಳು!” ಎಂದು ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿನ ಅರಿಯಲೂರಿನಲ್ಲಿ ಜನಿಸಿದ ವಲಮರ್ತಿ ಅವರು 1984 ರಲ್ಲಿ ಇಸ್ರೋಗೆ ಸೇರಿದ್ದು, ಇನ್ಸಾಟ್ 2 ಎ, ಐಆರ್ಎಸ್ ಐಸಿ, ಐಆರ್ಎಸ್ ಐಡಿ, ಟಿಇಎಸ್ ಸೇರಿದಂತೆ ಅನೇಕ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. 2011 ರಲ್ಲಿ ಜಿಸ್ಯಾಟ್ -12 ಮಿಷನ್ನ ಯೋಜನಾ ನಿರ್ದೇಶಕಿ ಟಿ.ಕೆ.ಅನುರಾಧಾ ನಂತರ ಪ್ರತಿಷ್ಠಿತ ಯೋಜನೆಯ ನೇತೃತ್ವ ವಹಿಸಿದ ಇಸ್ರೋದ ಎರಡನೇ ಮಹಿಳಾ ವಿಜ್ಞಾನಿಯಾಗಿದ್ದಾರೆ.ಅವರು ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ರಾಡಾರ್ ಇಮೇಜಿಂಗ್ ಉಪಗ್ರಹ ವಲರ್ಮತಿ – ರಿಸ್ಯಾಟ್ -1 ರ ಯೋಜನಾ ನಿರ್ದೇಶಕರಾಗಿದ್ದರು ಮತ್ತು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಗೌರವಾರ್ಥ 2015 ರಲ್ಲಿ ತಮಿಳುನಾಡು ಸರ್ಕಾರ ಸ್ಥಾಪಿಸಿದ ಅಬ್ದುಲ್ ಕಲಾಂ ಪ್ರಶಸ್ತಿಯನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…