ವಿಜ್ಞಾನಿ ವಲಮರ್ತಿ ಚಂದ್ರಯಾನ -3ರ ಉಡಾವಣೆಯ ದ್ವನಿಯಾಗಿದ್ದರು. ಹೃದಯಾ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ವಲಮರ್ತಿ ಅವರು ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ತಮ್ಮ ಕೊನೆಯ ದಿನಗಳಲ್ಲಿ ಚಂದ್ರಯಾನ 3 ಯಶಸ್ಸಿನಲ್ಲಿ ಭಾಗಿಯಾಗಿದ್ದರು. ರಾಕೆಟ್ ಲಾಂಚಿಂಗ್ ಸಂದರ್ಭದಲ್ಲಿ ಇವರು ನೀಡುವ ಕೌಂಟ್ ಡೌನ್ ಬಹಳ ಪ್ರಾಮುಖ್ಯದ್ದಾಗಿದೆ.
ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಇಸ್ರೋದ ಮಾಜಿ ನಿರ್ದೇಶಕ ಡಾ.ಪಿ.ವಿ.ವೆಂಕಟಕೃಷ್ಣನ್, “ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಕಾರ್ಯಾಚರಣೆಗಳ ಕ್ಷಣಗಣನೆಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ -3 ಅವರ ಅಂತಿಮ ಕ್ಷಣಗಣನೆ ಪ್ರಕಟಣೆಯಾಗಿತ್ತು. ಅನಿರೀಕ್ಷಿತ ಅಗಲಿಕೆಯಿಂದ ದುಃಖವಾಗುತ್ತಿದೆ. ಪ್ರಣಾಮಗಳು!” ಎಂದು ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿನ ಅರಿಯಲೂರಿನಲ್ಲಿ ಜನಿಸಿದ ವಲಮರ್ತಿ ಅವರು 1984 ರಲ್ಲಿ ಇಸ್ರೋಗೆ ಸೇರಿದ್ದು, ಇನ್ಸಾಟ್ 2 ಎ, ಐಆರ್ಎಸ್ ಐಸಿ, ಐಆರ್ಎಸ್ ಐಡಿ, ಟಿಇಎಸ್ ಸೇರಿದಂತೆ ಅನೇಕ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. 2011 ರಲ್ಲಿ ಜಿಸ್ಯಾಟ್ -12 ಮಿಷನ್ನ ಯೋಜನಾ ನಿರ್ದೇಶಕಿ ಟಿ.ಕೆ.ಅನುರಾಧಾ ನಂತರ ಪ್ರತಿಷ್ಠಿತ ಯೋಜನೆಯ ನೇತೃತ್ವ ವಹಿಸಿದ ಇಸ್ರೋದ ಎರಡನೇ ಮಹಿಳಾ ವಿಜ್ಞಾನಿಯಾಗಿದ್ದಾರೆ.ಅವರು ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ರಾಡಾರ್ ಇಮೇಜಿಂಗ್ ಉಪಗ್ರಹ ವಲರ್ಮತಿ – ರಿಸ್ಯಾಟ್ -1 ರ ಯೋಜನಾ ನಿರ್ದೇಶಕರಾಗಿದ್ದರು ಮತ್ತು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಗೌರವಾರ್ಥ 2015 ರಲ್ಲಿ ತಮಿಳುನಾಡು ಸರ್ಕಾರ ಸ್ಥಾಪಿಸಿದ ಅಬ್ದುಲ್ ಕಲಾಂ ಪ್ರಶಸ್ತಿಯನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…