ವಿಜ್ಞಾನಿ ವಲಮರ್ತಿ ಚಂದ್ರಯಾನ -3ರ ಉಡಾವಣೆಯ ದ್ವನಿಯಾಗಿದ್ದರು. ಹೃದಯಾ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ವಲಮರ್ತಿ ಅವರು ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ತಮ್ಮ ಕೊನೆಯ ದಿನಗಳಲ್ಲಿ ಚಂದ್ರಯಾನ 3 ಯಶಸ್ಸಿನಲ್ಲಿ ಭಾಗಿಯಾಗಿದ್ದರು. ರಾಕೆಟ್ ಲಾಂಚಿಂಗ್ ಸಂದರ್ಭದಲ್ಲಿ ಇವರು ನೀಡುವ ಕೌಂಟ್ ಡೌನ್ ಬಹಳ ಪ್ರಾಮುಖ್ಯದ್ದಾಗಿದೆ.
ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಇಸ್ರೋದ ಮಾಜಿ ನಿರ್ದೇಶಕ ಡಾ.ಪಿ.ವಿ.ವೆಂಕಟಕೃಷ್ಣನ್, “ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಕಾರ್ಯಾಚರಣೆಗಳ ಕ್ಷಣಗಣನೆಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ -3 ಅವರ ಅಂತಿಮ ಕ್ಷಣಗಣನೆ ಪ್ರಕಟಣೆಯಾಗಿತ್ತು. ಅನಿರೀಕ್ಷಿತ ಅಗಲಿಕೆಯಿಂದ ದುಃಖವಾಗುತ್ತಿದೆ. ಪ್ರಣಾಮಗಳು!” ಎಂದು ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿನ ಅರಿಯಲೂರಿನಲ್ಲಿ ಜನಿಸಿದ ವಲಮರ್ತಿ ಅವರು 1984 ರಲ್ಲಿ ಇಸ್ರೋಗೆ ಸೇರಿದ್ದು, ಇನ್ಸಾಟ್ 2 ಎ, ಐಆರ್ಎಸ್ ಐಸಿ, ಐಆರ್ಎಸ್ ಐಡಿ, ಟಿಇಎಸ್ ಸೇರಿದಂತೆ ಅನೇಕ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. 2011 ರಲ್ಲಿ ಜಿಸ್ಯಾಟ್ -12 ಮಿಷನ್ನ ಯೋಜನಾ ನಿರ್ದೇಶಕಿ ಟಿ.ಕೆ.ಅನುರಾಧಾ ನಂತರ ಪ್ರತಿಷ್ಠಿತ ಯೋಜನೆಯ ನೇತೃತ್ವ ವಹಿಸಿದ ಇಸ್ರೋದ ಎರಡನೇ ಮಹಿಳಾ ವಿಜ್ಞಾನಿಯಾಗಿದ್ದಾರೆ.ಅವರು ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ರಾಡಾರ್ ಇಮೇಜಿಂಗ್ ಉಪಗ್ರಹ ವಲರ್ಮತಿ – ರಿಸ್ಯಾಟ್ -1 ರ ಯೋಜನಾ ನಿರ್ದೇಶಕರಾಗಿದ್ದರು ಮತ್ತು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಗೌರವಾರ್ಥ 2015 ರಲ್ಲಿ ತಮಿಳುನಾಡು ಸರ್ಕಾರ ಸ್ಥಾಪಿಸಿದ ಅಬ್ದುಲ್ ಕಲಾಂ ಪ್ರಶಸ್ತಿಯನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…