ಅಂತಾರಾಷ್ಟ್ರೀಯ

ಚಂದ್ರಯಾನ- 3 ಉಡಾವಣೆಯ ಕೌಂಟ್​ಡೌನ್ ಹಿಂದಿನ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ವಲರ್ಮತಿ ನಿಧನ

ವಿಜ್ಞಾನಿ ವಲಮರ್ತಿ ಚಂದ್ರಯಾನ -3ರ ಉಡಾವಣೆಯ ದ್ವನಿಯಾಗಿದ್ದರು. ಹೃದಯಾ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ವಲಮರ್ತಿ ಅವರು ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ತಮ್ಮ ಕೊನೆಯ ದಿನಗಳಲ್ಲಿ ಚಂದ್ರಯಾನ 3 ಯಶಸ್ಸಿನಲ್ಲಿ ಭಾಗಿಯಾಗಿದ್ದರು. ರಾಕೆಟ್ ಲಾಂಚಿಂಗ್ ಸಂದರ್ಭದಲ್ಲಿ ಇವರು ನೀಡುವ ಕೌಂಟ್ ಡೌನ್ ಬಹಳ ಪ್ರಾಮುಖ್ಯದ್ದಾಗಿದೆ.

ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಇಸ್ರೋದ ಮಾಜಿ ನಿರ್ದೇಶಕ ಡಾ.ಪಿ.ವಿ.ವೆಂಕಟಕೃಷ್ಣನ್, “ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಕಾರ್ಯಾಚರಣೆಗಳ ಕ್ಷಣಗಣನೆಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ -3 ಅವರ ಅಂತಿಮ ಕ್ಷಣಗಣನೆ ಪ್ರಕಟಣೆಯಾಗಿತ್ತು. ಅನಿರೀಕ್ಷಿತ ಅಗಲಿಕೆಯಿಂದ ದುಃಖವಾಗುತ್ತಿದೆ. ಪ್ರಣಾಮಗಳು!” ಎಂದು ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿನ ಅರಿಯಲೂರಿನಲ್ಲಿ ಜನಿಸಿದ ವಲಮರ್ತಿ ಅವರು 1984 ರಲ್ಲಿ ಇಸ್ರೋಗೆ ಸೇರಿದ್ದು, ಇನ್ಸಾಟ್ 2 ಎ, ಐಆರ್‌ಎಸ್ ಐಸಿ, ಐಆರ್‌ಎಸ್ ಐಡಿ, ಟಿಇಎಸ್ ಸೇರಿದಂತೆ ಅನೇಕ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. 2011 ರಲ್ಲಿ ಜಿಸ್ಯಾಟ್ -12 ಮಿಷನ್ನ ಯೋಜನಾ ನಿರ್ದೇಶಕಿ ಟಿ.ಕೆ.ಅನುರಾಧಾ ನಂತರ ಪ್ರತಿಷ್ಠಿತ ಯೋಜನೆಯ ನೇತೃತ್ವ ವಹಿಸಿದ ಇಸ್ರೋದ ಎರಡನೇ ಮಹಿಳಾ ವಿಜ್ಞಾನಿಯಾಗಿದ್ದಾರೆ.ಅವರು ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ರಾಡಾರ್ ಇಮೇಜಿಂಗ್ ಉಪಗ್ರಹ ವಲರ್ಮತಿ – ರಿಸ್ಯಾಟ್ -1 ರ ಯೋಜನಾ ನಿರ್ದೇಶಕರಾಗಿದ್ದರು ಮತ್ತು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಗೌರವಾರ್ಥ 2015 ರಲ್ಲಿ ತಮಿಳುನಾಡು ಸರ್ಕಾರ ಸ್ಥಾಪಿಸಿದ ಅಬ್ದುಲ್ ಕಲಾಂ ಪ್ರಶಸ್ತಿಯನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…

13 hours ago

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…

13 hours ago

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…

18 hours ago

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…

19 hours ago

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…

19 hours ago

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…

19 hours ago