ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ
ಸಹಭಾಗಿತ್ವದಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ‘ಬಂಟ ಕಲಾ ಸಂಭ್ರಮ” ಆದಿತ್ಯವಾರ ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರದ ಗಣೇಶೋತ್ಸವದ ವೇದಿಕೆಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾನಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, “ಸಮಾಜದ ಸಂಘಟನೆಗೆ ಬಂಟ ಕಲಾ ಸಂಭ್ರಮದಂತಹ ಕಾರ್ಯಕ್ರಮ ಪೂರಕವಾಗಿರುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಸುಮಾರು 16 ತಂಡಗಳು ಭಾಗವಹಿಸುತ್ತಿದೆ. ಇಂತಹ ಸ್ಪರ್ಧೆಯಿಂದ ಎಲ್ಲಾ ಸಂಘಗಳು ಸಕ್ರಿಯವಾಗುತ್ತದೆ. ಪ್ರತಿಭಾ ಪ್ರದರ್ಶನಕ್ಕೆ ಇದೊಂದು ಒಳ್ಳೆಯ ವೇದಿಕೆ. ಬಂಟ ಕಲಾ ಸಂಭ್ರಮ ಶಿಸ್ತುಬದ್ಧವಾಗಿ ಆಯೋಜನೆಗೊಂಡಿದೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆ ಮಾಡಿರುವುದು ಬಂಟರ ಸಂಘದ ಹಿರಿಮೆಯಾಗಿದೆ. ಬಂಟರ ಮಾತೃ ಸಂಘದ ಅಡಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಅತೀವ ಸಂತಸ ತಂದಿದೆ. ಬಂಟ ಸಮುದಾಯ ಇಂದು ಎಲ್ಲಾ ಕ್ಷೇತ್ರಗಳಲ್ಲೂ ಮುಂದಿದೆ. ಎಲ್ಲರಿಂದ ಗುರುತಿಸಲ್ಪಟ್ಟು ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋಗುವ ನಾವು ಸಮಾಜದಲ್ಲಿ ಒಗ್ಗಟ್ಟಾಗಿದ್ದರೆ ಇನ್ನಷ್ಟು ಪ್ರಗತಿ ಸಾಧ್ಯ” ಎಂದರು.
ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ, ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಕೋಶಾಧಿಕಾರಿ ರಾಮ್ ಮೋಹನ್ ರೈ, ಕಾಸರಗೋಡು ಬಂಟರ ಸಂಘದ ಅಧ್ಯಕ್ಷ ಸುಬ್ಬಯ್ಯ ರೈ, ಕಾಸರಗೋಡು ಜಿಲ್ಲಾ ಸಂಚಾಲಕ ಕೆ ಸಂಜೀವ ಶೆಟ್ಟಿ, ಆಶಾಜ್ಯೋತಿ ರೈ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು ಮತ್ತಿತರರು ಉಪಸ್ಥಿತರಿದ್ದರು.
ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್ ಅತಿಥಿಗಳನ್ನು ಸ್ವಾಗತಿಸಿದರು.
ರವಿಚಂದ್ರ ಶೆಟ್ಟಿ ಅಶೋಕನಗರ ವಂದಿಸಿದರು. ಕಿರಣ್ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು. ಬಂಟ ಕಲಾ ಸಂಭ್ರಮದ ತೀರ್ಪುಗಾರರಾಗಿ ಮೈಮ್ ರಮೇಶ್, ರಂಗಾಯಣ, ಸುರೇಂದ್ರನಾಥ ಶೆಟ್ಟಿ ಮಾರ್ನಾಡ್, ಅವಿನಾಶ್ ಕಾಮತ್ ಭಾಗವಹಿಸಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…