ಜನ ಮನದ ನಾಡಿ ಮಿಡಿತ

Advertisement

ಶ್ರೀ ಕೃಷ್ಣ ಫ್ರೆಂಡ್ಸ್ ಕ್ಲಬ್ ನ 32ನೇ ವರ್ಷದ ಮುದ್ದುಕೃಷ್ಣ ವೇಷ ಸ್ಪರ್ಧೆ

ಮೂಡಬಿದಿರೆ : ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮೊಸರು ಕುಡಿಕೆ ಉತ್ಸವಕ್ಕೆ ಪೂರಕವಾಗಿ ಮೂಡುಬಿದಿರೆಯ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಸಮಾಜಮಂದಿರದಲ್ಲಿ ಭಾನುವಾರ ೩೨ನೇ ವರ್ಷದ ಮುದ್ದುಕೃಷ್ಣ ವೇಷ ಸ್ಪರ್ಧೆ ನಡೆಯಿತು.

ದಂತವೈದ್ಯ ಡಾ. ವಿನಯಕುಮಾರ ಹೆಗ್ಡೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ, ಧಾರ್ಮಿಕ ಹಿನ್ನೆಲೆಯ, ಕಲಾತ್ಮಕ ಚಟುವಟಿಕೆಯ ಪ್ರತೀಕವಾದ ಮುದ್ದು ಕೃಷ್ಣ ವೇಷ ಸ್ಪರ್ಧೆಯನ್ನು ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಮೂರು ದಶಕಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿರುವುದು ಶ್ಲಾಘನೀಯ. ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ತೀವ್ರ ಉತ್ಸಾಹ ವ್ಯಕ್ತವಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದವರು ತಿಳಿಸಿದರು.
ಮುಖ್ಯಅತಿಥಿಯಾಗಿ ಪಾಲ್ಗೊಂಡ ಉದ್ಯಮಿ ಪ್ರಭಾತ್ ಚಂದ್ರ ಜೈನ್ ಮಾತನಾಡಿ, ಮನೋಸ್ಥೈರ್ಯ, ಚತುರತೆ ಇದ್ದರೆ ಯಾವುದೇ ಸಮಸ್ಯೆಯನ್ನು ಲೀಲಾಜಾಲವಾಗಿ ಪರಿಹರಿಸಬಹುದೆಂಬುದನ್ನು ಶ್ರೀ ಕೃಷ್ಣ ತನ್ನ ವ್ಯಕ್ತಿತ್ವದ ಮೂಲಕ ಸಾರಿರುವುದು ಮಾನವರಾದ ನಮಗೆಲ್ಲ ಆದರ್ಶ ಎಂದರು.


ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಘಟನೆಯ ಪ್ರ. ಕಾರ್ಯದರ್ಶಿ ಸುದರ್ಶನ ಎಂ. ಎಲ್ಲ ಕಾಲಕ್ಕೂ ಸಲ್ಲುವ ಶ್ರೀ ಕೃಷ್ಣನ ವ್ಯಕ್ತಿತ್ವ ವಿಶೇಷ ತಿಳಿಸಿ ಮನುಕುಲ ಯಾವ ರೀತಿ ಬದುಕಬೇಕು ಎಂಬುದನ್ನು ತಿಳಿಸಿಕೊಟ್ಟು ಜಗ್ದ್ ವಂದ್ಯನೆನೆಸಿಕೊಂಡಿದ್ದಾನೆ ಎಂದರು.
ತೀರ್ಪುಗಾರರಾದ ಶಿವಕುಮಾರ ಉಮ್ಮತ್ತೂರು, ರಮ್ಯಾ ಸುರೇಂದ್ರ ಕಾರ್ಕಳ ಮತ್ತು ರೇಷ್ಮಾ ಹರ್ಷ ಇವರನ್ನು ಅತಿಥಿಗಳು ಗೌರವಿಸಿದರು.
ಸಂಚಾಲಕ ಸಂತೋಷ್ ಕುಮಾರ್ ಸ್ವಾಗತಿಸಿ, ಧನಂಜಯ ಮೂಡುಬಿದಿರೆ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷರಾದ ಜಗದೀಶ ಶೆಟ್ಟಿ, ಸಂಜೀವ ನಾಯ್ಕ್ , ಜತೆ ಕಾರ್ಯದರ್ಶಿಗಳಾದ ಸತೀಶ `ಭಂಡಾರಿ, ಆನಂದ ಸುವರ್ಣ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!