ಮೂಡಬಿದಿರೆ : ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮೊಸರು ಕುಡಿಕೆ ಉತ್ಸವಕ್ಕೆ ಪೂರಕವಾಗಿ ಮೂಡುಬಿದಿರೆಯ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಸಮಾಜಮಂದಿರದಲ್ಲಿ ಭಾನುವಾರ ೩೨ನೇ ವರ್ಷದ ಮುದ್ದುಕೃಷ್ಣ ವೇಷ ಸ್ಪರ್ಧೆ ನಡೆಯಿತು.
ದಂತವೈದ್ಯ ಡಾ. ವಿನಯಕುಮಾರ ಹೆಗ್ಡೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ, ಧಾರ್ಮಿಕ ಹಿನ್ನೆಲೆಯ, ಕಲಾತ್ಮಕ ಚಟುವಟಿಕೆಯ ಪ್ರತೀಕವಾದ ಮುದ್ದು ಕೃಷ್ಣ ವೇಷ ಸ್ಪರ್ಧೆಯನ್ನು ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಮೂರು ದಶಕಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿರುವುದು ಶ್ಲಾಘನೀಯ. ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ತೀವ್ರ ಉತ್ಸಾಹ ವ್ಯಕ್ತವಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದವರು ತಿಳಿಸಿದರು.
ಮುಖ್ಯಅತಿಥಿಯಾಗಿ ಪಾಲ್ಗೊಂಡ ಉದ್ಯಮಿ ಪ್ರಭಾತ್ ಚಂದ್ರ ಜೈನ್ ಮಾತನಾಡಿ, ಮನೋಸ್ಥೈರ್ಯ, ಚತುರತೆ ಇದ್ದರೆ ಯಾವುದೇ ಸಮಸ್ಯೆಯನ್ನು ಲೀಲಾಜಾಲವಾಗಿ ಪರಿಹರಿಸಬಹುದೆಂಬುದನ್ನು ಶ್ರೀ ಕೃಷ್ಣ ತನ್ನ ವ್ಯಕ್ತಿತ್ವದ ಮೂಲಕ ಸಾರಿರುವುದು ಮಾನವರಾದ ನಮಗೆಲ್ಲ ಆದರ್ಶ ಎಂದರು.
ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಘಟನೆಯ ಪ್ರ. ಕಾರ್ಯದರ್ಶಿ ಸುದರ್ಶನ ಎಂ. ಎಲ್ಲ ಕಾಲಕ್ಕೂ ಸಲ್ಲುವ ಶ್ರೀ ಕೃಷ್ಣನ ವ್ಯಕ್ತಿತ್ವ ವಿಶೇಷ ತಿಳಿಸಿ ಮನುಕುಲ ಯಾವ ರೀತಿ ಬದುಕಬೇಕು ಎಂಬುದನ್ನು ತಿಳಿಸಿಕೊಟ್ಟು ಜಗ್ದ್ ವಂದ್ಯನೆನೆಸಿಕೊಂಡಿದ್ದಾನೆ ಎಂದರು.
ತೀರ್ಪುಗಾರರಾದ ಶಿವಕುಮಾರ ಉಮ್ಮತ್ತೂರು, ರಮ್ಯಾ ಸುರೇಂದ್ರ ಕಾರ್ಕಳ ಮತ್ತು ರೇಷ್ಮಾ ಹರ್ಷ ಇವರನ್ನು ಅತಿಥಿಗಳು ಗೌರವಿಸಿದರು.
ಸಂಚಾಲಕ ಸಂತೋಷ್ ಕುಮಾರ್ ಸ್ವಾಗತಿಸಿ, ಧನಂಜಯ ಮೂಡುಬಿದಿರೆ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷರಾದ ಜಗದೀಶ ಶೆಟ್ಟಿ, ಸಂಜೀವ ನಾಯ್ಕ್ , ಜತೆ ಕಾರ್ಯದರ್ಶಿಗಳಾದ ಸತೀಶ `ಭಂಡಾರಿ, ಆನಂದ ಸುವರ್ಣ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…