ಜನ ಮನದ ನಾಡಿ ಮಿಡಿತ

Advertisement

ಹಿಂದೂ ಸಮಾಜವನ್ನು ಕೆಣಕಿದರೆ ಸುಮ್ಮನಿರುವುದಿಲ್ಲ; ಡಾ. ಪ್ರಭಾಕರ್ ಭಟ್

ಬಂಟ್ವಾಳ : ಹಿಂದೂ ಸಮಾಜವನ್ನು ಕೆಣಕಿದರೆ ಸುಮ್ಮನಿರುವುದಿಲ್ಲ, ಹಿಂದೂ ಸಮಾಜದ ಮಹಾಪುರುಷರಿಗೆ ಅಪಮಾನ ಮಾಡಿದರೆ ಸಹಿಸಲು ಸಾಧ್ಯವಿಲ್ಲ ಎಂದು ಆರ್.ಎಸ್.ಎಸ್.ಪ್ರಮುಖರಾದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಹೇಳಿದರು.
ಅವರು ಸ್ವಾತಂತ್ರ್ಯ ವೀರ ದಾಮೋದರ ಸಾವರ್ಕರ್ ಅವಮಾನವನ್ನು ಖಂಡಿಸಿ ವಿಶ್ವಹಿಂದೂ‌ಪರಿಷತ್ ಬಜರಂಗಳ ಮಂಚಿ ಘಟಕ ಮತ್ತು ಮಾತೃಶಕ್ತಿ,ದುರ್ಗವಾಹಿನಿ ಮಂಚಿ ಘಟಕದ ವತಿಯಿಂದ ಮಂಚಿ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ನಡೆದ ಹಿಂದೂ ಜಾಗೃತಿ ಸಮಾವೇಶದಲ್ಲಿ ಮಾತನಾಡಿದರು.

ಹಿಂದೂ ಸಮಾಜ ಕ್ಷಣಕ್ಷಣವೂ ಎಚ್ಚರದಿಂದರಬೇಕು. ಲವ್ ಜಿಹಾದ್ ನಂತಹ ಮೋಸದ ಬಲೆಗೆ ಬೀಳಬಾರದು ಎಂದು ಅವರು ಎಚ್ಚರಿಸಿದರು.
ಮಹಿಳಾ ಪರ ಮಾತನಾಡುವ ರಾಜ್ಯದ ಕಾಂಗ್ರೆಸ್ ಸರಕಾರ ಮಂಚಿಯ ಶಾಲಾ ಶಿಕ್ಷಕಿಗೆ ಅನ್ಯಾಯವಾದಗ ಸೌಜನ್ಯಕ್ಕಾದರೂ ವಿಚಾರಿಸುವ ಕೆಲಸ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದರು. ಇಲ್ಲಿ ಸೌಜನ್ಯಕ್ಕೆ ಬೆಲೆಯಿಲ್ಲದಂತಾಗಿದೆ. ಹಾಗಾಗಿ ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರ ಮಾಡಿ ಕೊಲೆಯಾದ ಅಮಾಯಕ ಶಾಲಾ ಬಾಲಕಿ ಸೌಜನ್ಯ ನಿಗೆ ನ್ಯಾಯಸಿಕ್ಕಿಲ್ಲ ಎಂದು ಹೇಳಿದರು.

ಪದ್ಮಾಲತನಿಂದ ಹಿಡಿದು ಸೌಜನ್ಯ ವರೆಗೆ ನಡೆದ ಸಾಲುಸಾಲು ಕೊಲೆಗಳಿಗೆ ನ್ಯಾಯಸಿಗಬೇಕಾಗಿದೆ ಎಂದು ಅವರು ಒತ್ತಿ ಹೇಳಿದರು. ದೇಶದ್ಯಾಂತ ನಡೆಯುವ ಹೋರಾಟದ ಕಿಚ್ಚು ನೋಡಿದರೆ ಸೌಜನ್ಯ ಎಂಬ ಬಾಲಕಿ ದೇವಿ ರೂಪದಿಂದ ಬಂದಿದ್ದಾಳೆ ಅಂತ ಕಾಣುತ್ತದೆ ಎಂದು ಹೇಳಿದರು. ರಾತ್ರಿಯಿಡಿ ಹುಡುಕಿದರು ಸಿಗದ ಸೌಜನ್ಯನ ಮೃತದೇಹ ಮರುದಿನ ಅದೇ ಸ್ಥಳಕ್ಕೆ ಹೇಗೆ ಬಂತು ಎಂದು ಪ್ರಶ್ನಿಸಿದರು. ಸೌಜನ್ಯ ನಿಗೆ ನ್ಯಾಯ ಸಿಕ್ಕರೆ ಇಡೀ ಮಹಿಳೆಯರಿಗೆ ನ್ಯಾಯ ಸಿಕ್ಕಂತೆ ಎಂದು ಹೇಳಿದರು.

ದೇಶದಲ್ಲಿರುವ ಲಕ್ಷ ಲಕ್ಷ ಮಸೀದಿಗಳು , ಚರ್ಚ್ ಗಳು ಹಿಂದೂಗಳ ಪವಿತ್ರ ನೆಲದಲ್ಲಿದರುವುದು ಎಂಬುದನ್ನು ನೆನಪು ಮಾಡಬೇಕಾಗಿದೆ ಎಂದು ಹೇಳಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಬೈಕ್ ಚಲೋ ನಡೆಯಿತು. ಜೊತೆಗೆ ಪ್ರತಿ ಮನೆಗೆ ಸಾವರ್ಕರ್ ಪೋಟೋ ಮತ್ತು ಚರಿತ್ರೆ ಪುಸ್ತಕ ವನ್ನು ನೀಡಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಸೈನಿಕ ರಮೇಶ್ ರಾವ್ ನೂಜಿಪ್ಪಾಡಿ ವಹಿಸಿದ್ದರು.
ವೇದಿಕೆಯಲ್ಲಿ ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಸಂಚಾಲಕ ಶರಣ್ ಪಂಪ್ ವೆಲ್, ವಿಹಿಂಪ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಪುತ್ತೂರು,ಸಚಿನ್ ಮೆಲ್ಕಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!