ಬಂಟ್ವಾಳ : ಹಿಂದೂ ಸಮಾಜವನ್ನು ಕೆಣಕಿದರೆ ಸುಮ್ಮನಿರುವುದಿಲ್ಲ, ಹಿಂದೂ ಸಮಾಜದ ಮಹಾಪುರುಷರಿಗೆ ಅಪಮಾನ ಮಾಡಿದರೆ ಸಹಿಸಲು ಸಾಧ್ಯವಿಲ್ಲ ಎಂದು ಆರ್.ಎಸ್.ಎಸ್.ಪ್ರಮುಖರಾದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಹೇಳಿದರು.
ಅವರು ಸ್ವಾತಂತ್ರ್ಯ ವೀರ ದಾಮೋದರ ಸಾವರ್ಕರ್ ಅವಮಾನವನ್ನು ಖಂಡಿಸಿ ವಿಶ್ವಹಿಂದೂಪರಿಷತ್ ಬಜರಂಗಳ ಮಂಚಿ ಘಟಕ ಮತ್ತು ಮಾತೃಶಕ್ತಿ,ದುರ್ಗವಾಹಿನಿ ಮಂಚಿ ಘಟಕದ ವತಿಯಿಂದ ಮಂಚಿ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ನಡೆದ ಹಿಂದೂ ಜಾಗೃತಿ ಸಮಾವೇಶದಲ್ಲಿ ಮಾತನಾಡಿದರು.
ಹಿಂದೂ ಸಮಾಜ ಕ್ಷಣಕ್ಷಣವೂ ಎಚ್ಚರದಿಂದರಬೇಕು. ಲವ್ ಜಿಹಾದ್ ನಂತಹ ಮೋಸದ ಬಲೆಗೆ ಬೀಳಬಾರದು ಎಂದು ಅವರು ಎಚ್ಚರಿಸಿದರು.
ಮಹಿಳಾ ಪರ ಮಾತನಾಡುವ ರಾಜ್ಯದ ಕಾಂಗ್ರೆಸ್ ಸರಕಾರ ಮಂಚಿಯ ಶಾಲಾ ಶಿಕ್ಷಕಿಗೆ ಅನ್ಯಾಯವಾದಗ ಸೌಜನ್ಯಕ್ಕಾದರೂ ವಿಚಾರಿಸುವ ಕೆಲಸ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದರು. ಇಲ್ಲಿ ಸೌಜನ್ಯಕ್ಕೆ ಬೆಲೆಯಿಲ್ಲದಂತಾಗಿದೆ. ಹಾಗಾಗಿ ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರ ಮಾಡಿ ಕೊಲೆಯಾದ ಅಮಾಯಕ ಶಾಲಾ ಬಾಲಕಿ ಸೌಜನ್ಯ ನಿಗೆ ನ್ಯಾಯಸಿಕ್ಕಿಲ್ಲ ಎಂದು ಹೇಳಿದರು.
ಪದ್ಮಾಲತನಿಂದ ಹಿಡಿದು ಸೌಜನ್ಯ ವರೆಗೆ ನಡೆದ ಸಾಲುಸಾಲು ಕೊಲೆಗಳಿಗೆ ನ್ಯಾಯಸಿಗಬೇಕಾಗಿದೆ ಎಂದು ಅವರು ಒತ್ತಿ ಹೇಳಿದರು. ದೇಶದ್ಯಾಂತ ನಡೆಯುವ ಹೋರಾಟದ ಕಿಚ್ಚು ನೋಡಿದರೆ ಸೌಜನ್ಯ ಎಂಬ ಬಾಲಕಿ ದೇವಿ ರೂಪದಿಂದ ಬಂದಿದ್ದಾಳೆ ಅಂತ ಕಾಣುತ್ತದೆ ಎಂದು ಹೇಳಿದರು. ರಾತ್ರಿಯಿಡಿ ಹುಡುಕಿದರು ಸಿಗದ ಸೌಜನ್ಯನ ಮೃತದೇಹ ಮರುದಿನ ಅದೇ ಸ್ಥಳಕ್ಕೆ ಹೇಗೆ ಬಂತು ಎಂದು ಪ್ರಶ್ನಿಸಿದರು. ಸೌಜನ್ಯ ನಿಗೆ ನ್ಯಾಯ ಸಿಕ್ಕರೆ ಇಡೀ ಮಹಿಳೆಯರಿಗೆ ನ್ಯಾಯ ಸಿಕ್ಕಂತೆ ಎಂದು ಹೇಳಿದರು.
ದೇಶದಲ್ಲಿರುವ ಲಕ್ಷ ಲಕ್ಷ ಮಸೀದಿಗಳು , ಚರ್ಚ್ ಗಳು ಹಿಂದೂಗಳ ಪವಿತ್ರ ನೆಲದಲ್ಲಿದರುವುದು ಎಂಬುದನ್ನು ನೆನಪು ಮಾಡಬೇಕಾಗಿದೆ ಎಂದು ಹೇಳಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಬೈಕ್ ಚಲೋ ನಡೆಯಿತು. ಜೊತೆಗೆ ಪ್ರತಿ ಮನೆಗೆ ಸಾವರ್ಕರ್ ಪೋಟೋ ಮತ್ತು ಚರಿತ್ರೆ ಪುಸ್ತಕ ವನ್ನು ನೀಡಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಸೈನಿಕ ರಮೇಶ್ ರಾವ್ ನೂಜಿಪ್ಪಾಡಿ ವಹಿಸಿದ್ದರು.
ವೇದಿಕೆಯಲ್ಲಿ ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಸಂಚಾಲಕ ಶರಣ್ ಪಂಪ್ ವೆಲ್, ವಿಹಿಂಪ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಪುತ್ತೂರು,ಸಚಿನ್ ಮೆಲ್ಕಾರ್ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…