ಬಂಟ್ವಾಳ: ರಿಕ್ಷಾ ಮತ್ತು ಕಾರಿನ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಬಾಲಕಿ ಸಹಿತ ನಾಲ್ವರು ಗಾಯಗೊಂಡ ಘಟನೆ ವಗ್ಗ ಎಂಬಲ್ಲಿ ನಡೆದಿದೆ.
ಎಂಟು ವರ್ಷದ ಬಾಲಕಿ ಶ್ರೀನಿತ , ಪದ್ಮಲತಾ, ಅಪ್ಪಿಪೂಜಾರಿ ಮತ್ತು ಚಾಲಕ ಸಂಜೀವ ಪೂಜಾರಿ ಗಾಯಗೊಂಡವರು.
ಕಾರು ಚಾಲಕ ಮಹಮ್ಮದ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ಈ ಘಟನೆ ನಡೆದಿದೆ.
ಕಾಡಬೆಟ್ಟು ಕ್ರಾಸ್ ನಿಂದ ಹೆದ್ದಾರಿಗೆ ರಿಕ್ಷಾ ಪ್ರವೇಶ ಮಾಡುವ ಸಂದರ್ಭದಲ್ಲಿ ಡಿಕ್ಕಿಹೊಡೆದಿದೆ
ಮಂಗಳೂರಿನಿಂದ ಬೆಳ್ತಂಗಡಿ ಮಾರ್ಗವಾಗಿ ಬೆಂಗಳೂರುಕಡೆಗೆ ಹೋಗುತ್ತಿದ್ದ ಕಾರಿಗೆ ಕಾಡಬೆಟ್ಟು ಕ್ರಾಸ್ ನಲ್ಲಿ ಏಕಾಏಕಿ ರಿಕ್ಷಾ ಹೆದ್ದಾರಿಗೆ ನುಗ್ಗಿಸಿದ ಪರಿಣಾಮ ವಾಗಿ ಅಪಘಾತ ನಡೆದಿದೆ ಎಂದು ಹೇಳಲಾಗಿದ್ದು,ಕಾರು ಚಾಲಕ ಮಹಮ್ಮದ್ ರಿಕ್ಷಾ ಚಾಲಕನ ಮೇಲೆ ದೂರು ನೀಡಿದ್ದು,ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…