ಬಂಟ್ವಾಳ: ರಿಕ್ಷಾ ಮತ್ತು ಕಾರಿನ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಬಾಲಕಿ ಸಹಿತ ನಾಲ್ವರು ಗಾಯಗೊಂಡ ಘಟನೆ ವಗ್ಗ ಎಂಬಲ್ಲಿ ನಡೆದಿದೆ.
ಎಂಟು ವರ್ಷದ ಬಾಲಕಿ ಶ್ರೀನಿತ , ಪದ್ಮಲತಾ, ಅಪ್ಪಿಪೂಜಾರಿ ಮತ್ತು ಚಾಲಕ ಸಂಜೀವ ಪೂಜಾರಿ ಗಾಯಗೊಂಡವರು.
ಕಾರು ಚಾಲಕ ಮಹಮ್ಮದ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ಈ ಘಟನೆ ನಡೆದಿದೆ.
ಕಾಡಬೆಟ್ಟು ಕ್ರಾಸ್ ನಿಂದ ಹೆದ್ದಾರಿಗೆ ರಿಕ್ಷಾ ಪ್ರವೇಶ ಮಾಡುವ ಸಂದರ್ಭದಲ್ಲಿ ಡಿಕ್ಕಿಹೊಡೆದಿದೆ
ಮಂಗಳೂರಿನಿಂದ ಬೆಳ್ತಂಗಡಿ ಮಾರ್ಗವಾಗಿ ಬೆಂಗಳೂರುಕಡೆಗೆ ಹೋಗುತ್ತಿದ್ದ ಕಾರಿಗೆ ಕಾಡಬೆಟ್ಟು ಕ್ರಾಸ್ ನಲ್ಲಿ ಏಕಾಏಕಿ ರಿಕ್ಷಾ ಹೆದ್ದಾರಿಗೆ ನುಗ್ಗಿಸಿದ ಪರಿಣಾಮ ವಾಗಿ ಅಪಘಾತ ನಡೆದಿದೆ ಎಂದು ಹೇಳಲಾಗಿದ್ದು,ಕಾರು ಚಾಲಕ ಮಹಮ್ಮದ್ ರಿಕ್ಷಾ ಚಾಲಕನ ಮೇಲೆ ದೂರು ನೀಡಿದ್ದು,ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…