ಮಂಗಳೂರಿನ ಹೊಸ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ನೇಮಕಗೊಂಡಿದ್ದಾರೆ.
ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್. ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕುಲದೀಪ್ ಅವರಿಗೆ ಯಾವ ಹುದ್ದೆ ಎಂದು ತೋರಿಸದೆ ವರ್ಗಾವಣೆ ಮಾಡಿದೆ. ಕುಲದೀಪ್ ಅವರು ಖಡಕ್ ಆಫೀಸರ್ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದರು.
ಇನ್ನು ನೂತನ ಆಯುಕ್ತರಾಗಿರುವ ಅನುಪಮ್ ಅಗರ್ವಾಲ್ 2008-ಬ್ಯಾಚ್ IPS ಅಧಿಕಾರಿಯಾಗಿದ್ದು ಮೂಲತಃ ರಾಜಸ್ಥಾನದ ಜೋಧ್ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪ ಪೊಲೀಸ್ ಆಯುಕ್ತರಾಗಿ, ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…