ವಿಟ್ಲ: ಗೋಡೆಯ ಮೇಲೆ ಅಶ್ಲೀಲ ಬರಹಗಳನ್ನು ಬರೆದಿರುವ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.
ಕಿಡಿಗೇಡಿಗಳು ಶಾಲೆಯ ಎಲ್ಲ ತರಗತಿ ಕೊಠಡಿಯ ಬಾಗಿಲ ಬಳಿ ಮೊಟ್ಟೆ ಒಡೆದಿದ್ದಾರೆ. ಅಲ್ಲದೇ ಒಂದು ಕೊಠಡಿಯ ಕಿಟಕಿಯ ಗಾಜನ್ನು ಒಡೆದಿರುವುದಲ್ಲದೇ, ಮಕ್ಕಳ ಸೃಜನಾತ್ಮಕತೆಗೆ ಒದಗಿಸಿದ ಸೂಚನಾ ಫಲಕದ ಗಾಜು, ಜೊತೆಗೆ ಶಾಲೆಯ ಟ್ಯೂಬ್ ಲೈಟ್ಗಳನ್ನು ಒಡೆದು ಹಾಕಿದ್ದಾರೆ. ಪ್ರಾಥಮಿಕ ಶಾಲೆಯ ಗೇಟ್ ಮತ್ತು ಅಡುಗೆ ಕೋಣೆಯ ಬಾಗಿಲಿಗೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ವಿದ್ಯಾರ್ಥಿಗಳು ಬಿಡಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಹರಿದು ಹಾಕಿದ್ದಾರೆ. ಅಲ್ಲದೆ ಶಾಲೆ ಗೋಡೆ ಮೇಲೆ ಅಶ್ಲೀಲ ಬರಹಗಳನ್ನು ಬರೆದಿದ್ದಾರೆ.
ಇದರಿಂದಾಗಿ ಶಾಲೆಯ ದೈನಂದಿನ ತರಗತಿಗೆ ತೊಂದರೆ ಉಂಟಾಗಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಾಲಾ ಮೈದಾನವನ್ನು ಅಕ್ರಮವಾಗಿ ಪ್ರವೇಶಿಸಿರುವ ತಂಡ ಕ್ರಿಕೆಟ್ ಆಡಿ ಬಳಿಕ ಈ ಕೃತ್ಯ ಎಸಗಿರಬಹುದು ಎಂದು ಸಂಶಯಿಸಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…