ಜನ ಮನದ ನಾಡಿ ಮಿಡಿತ

Advertisement

ಶಶಿಕಲಾ ನಟರಾಜ್‌ಗೆ ಮತ್ತೆ ಸಂಕಷ್ಟ; ಜಾಮೀನು ರಹಿತ ವಾರೆಂಟ್ ಜಾರಿ

ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ನಟರಾಜ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ಸೇವೆ ಪಡೆದ ಪ್ರಕರಣದಲ್ಲಿ ಕೋರ್ಟ್‌ ಶಶಿಕಲಾ ನಟರಾಜ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. 2017ರಲ್ಲಿ ಶಶಿಕಲಾ ನಟರಾಜ್ ಅವರು ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದರು. 2017ರಿಂದ 2021 ಜನವರಿವರೆಗೂ ಶಶಿಕಲಾ ನಟರಾಜ್ ಸೆರೆವಾಸ ಅನುಭವಿಸಿದ್ದರು. ಈ ವೇಳೆ ಬೆಂಗಳೂರು ಸೆಂಟ್ರಲ್ ಜೈಲಿನಲ್ಲಿ ಐಷಾರಾಮಿ ಸೇವೆ ಪಡೆದ ಆರೋಪವನ್ನು ಎದುರಿಸುತ್ತಿದ್ದಾರೆ.

ಸೆಂಟ್ರಲ್ ಜೈಲಿನಲ್ಲಿ ಶಶಿಕಲಾ ನಟರಾಜ್‌ ಅವರು ಐಷಾರಾಮಿ ಸೇವೆ ಪಡೆದ ಪ್ರಕರಣ ಸಾಕಷ್ಟು ಸದ್ದು ಮಾಡಿತ್ತು. ಈ ಬಗ್ಗೆ ತನಿಖೆ ಮಾಡಲಾಗಿದ್ದು ಲೋಕಾಯುಕ್ತ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಇತ್ತೀಚೆಗೆ ಹೈಕೋರ್ಟ್ ಜೈಲಿನ ಸಿಬ್ಬಂದಿ ವಿರುದ್ಧದ ಆರೋಪವನ್ನು ರದ್ದು ಮಾಡಿತ್ತು. ಅದರಂತೆ ತಮ್ಮ ವಿರುದ್ಧದ ಕೇಸ್ ರದ್ದುಗೊಳಿಸುವಂತೆ ಶಶಿಕಲಾ ನಟರಾಜ್ ಅವರು ಕೋರಿದ್ದಾರೆ. ನಿನ್ನೆ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಶಶಿಕಲಾ ನಟರಾಜ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ಶಶಿಕಲಾ ಅವರ ಜೊತೆಗೆ ಅವರಿಗೆ ಶ್ಯೂರಿಟಿ ನೀಡಿದ್ದವರಿಗೂ ನೊಟೀಸ್ ಜಾರಿಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!