ಜನ ಮನದ ನಾಡಿ ಮಿಡಿತ

Advertisement

ಶಶಿಕಲಾ ನಟರಾಜ್‌ಗೆ ಮತ್ತೆ ಸಂಕಷ್ಟ; ಜಾಮೀನು ರಹಿತ ವಾರೆಂಟ್ ಜಾರಿ

ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ನಟರಾಜ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ಸೇವೆ ಪಡೆದ ಪ್ರಕರಣದಲ್ಲಿ ಕೋರ್ಟ್‌ ಶಶಿಕಲಾ ನಟರಾಜ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. 2017ರಲ್ಲಿ ಶಶಿಕಲಾ ನಟರಾಜ್ ಅವರು ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದರು. 2017ರಿಂದ 2021 ಜನವರಿವರೆಗೂ ಶಶಿಕಲಾ ನಟರಾಜ್ ಸೆರೆವಾಸ ಅನುಭವಿಸಿದ್ದರು. ಈ ವೇಳೆ ಬೆಂಗಳೂರು ಸೆಂಟ್ರಲ್ ಜೈಲಿನಲ್ಲಿ ಐಷಾರಾಮಿ ಸೇವೆ ಪಡೆದ ಆರೋಪವನ್ನು ಎದುರಿಸುತ್ತಿದ್ದಾರೆ.

ಸೆಂಟ್ರಲ್ ಜೈಲಿನಲ್ಲಿ ಶಶಿಕಲಾ ನಟರಾಜ್‌ ಅವರು ಐಷಾರಾಮಿ ಸೇವೆ ಪಡೆದ ಪ್ರಕರಣ ಸಾಕಷ್ಟು ಸದ್ದು ಮಾಡಿತ್ತು. ಈ ಬಗ್ಗೆ ತನಿಖೆ ಮಾಡಲಾಗಿದ್ದು ಲೋಕಾಯುಕ್ತ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಇತ್ತೀಚೆಗೆ ಹೈಕೋರ್ಟ್ ಜೈಲಿನ ಸಿಬ್ಬಂದಿ ವಿರುದ್ಧದ ಆರೋಪವನ್ನು ರದ್ದು ಮಾಡಿತ್ತು. ಅದರಂತೆ ತಮ್ಮ ವಿರುದ್ಧದ ಕೇಸ್ ರದ್ದುಗೊಳಿಸುವಂತೆ ಶಶಿಕಲಾ ನಟರಾಜ್ ಅವರು ಕೋರಿದ್ದಾರೆ. ನಿನ್ನೆ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಶಶಿಕಲಾ ನಟರಾಜ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ಶಶಿಕಲಾ ಅವರ ಜೊತೆಗೆ ಅವರಿಗೆ ಶ್ಯೂರಿಟಿ ನೀಡಿದ್ದವರಿಗೂ ನೊಟೀಸ್ ಜಾರಿಯಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!