ಜನ ಮನದ ನಾಡಿ ಮಿಡಿತ

Advertisement

ಗಾಂಧಿನಗರದಲ್ಲಿ ನೂತನ ಅಂಗನವಾಡಿಯ ಕೊಠಡಿ ಉದ್ಘಾಟನೆ

ಮೂಡಬಿದಿರೆ: ರಾಜ್ಯ ಸರ್ಕಾರ ಅನುದಾನ ಬಿಡುಗಡೆಯಾದ ಕೂಡಲೇ ಪುರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸಗಳ ನಡೆಯಲಿದ್ದು, ಗಾಂಧಿನಗರದಲ್ಲಿ ಹೊಸ ಪಾರ್ಕ್ ನಿರ್ಮಾಣವಾಗುತ್ತಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ.

ಇವರು 2020-21ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿ ಹಾಗೂ 2022-23ನೇ ಸಾಲಿನ ಪುರಸಭೆ ನಿಧಿಯಡಿ ನಿರ್ಮಾಣಗೊಂಡ ಗಾಂಧಿನಗರ ಅಂಗನವಾಡಿ ಕೇಂದ್ರದ ನೂತನ ಕೊಠಡಿಯನ್ನು ಉದ್ಘಾಟಿಸಿ ಮಾತಾನಾಡಿದ ಇವರು ಬಂಟ್ವಾಳದಿಂದ ಪೇಪರ್‌ಮಿಲ್ಲ್ ಮಾರ್ಗವಾಗಿ ಬರುವವರಿಗೆ ನೇರವಾಗಿ ಮಂಗಳೂರಿಗೆ ಹೋಗಲು ಮಾಸ್ತಿಕಟ್ಟೆ, ಗಾಂಧಿನಗರ ಮಾರ್ಗವಾಗಿ ರಿಂಗ್‌ರೋಡ್ ಕಾಮಗಾರಿ ನಡೆಯುತ್ತಿದ್ದು, ಇದರಿಂದ ಮೂಡುಬಿದಿರೆ ನಗರದಲ್ಲಿ ವಾಹನದಟ್ಟಣೆ ಕಡಿಮೆಯಾಗಲಿದೆ ಎಂದರು. ಈ ವೇಳೆ ಶಾಸಕ ಉಮಾನಾಥ ಕೋಟ್ಯಾನ್, ಗುತ್ತಿಗೆದಾರ ಎಂ.ಕಣ್ಣನ್, ಅಂಗನವಾಡಿ ಕೇಂದ್ರದ ಹಳೇ ವಿದ್ಯಾರ್ಥಿನಿ ಹಾಗೂ ಝೀ ಕನ್ನಡ ವಾಹಿನಿಯ ಡಾನ್ಸ್ ಕರ್ನಾಟಕ ಡಾನ್ಸ್ ಸ್ಪರ್ಧಿಯಾದ ಚೈತನ್ಯ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಇನ್ನೂ ಈ ಸಂದರ್ಭದಲ್ಲಿ ವಾರ್ಡ್ ಸದಸ್ಯೆ ದಿವ್ಯಾ ಜಗದೀಶ್, ಪುರಸಭೆ ಸದಸ್ಯರಾದ ನವೀನ್ ಶೆಟ್ಟಿ, ನಾಗರಾಜ ಪೂಜಾರಿ, ಶ್ವೇತಾ ಪ್ರವೀಣ್, ಸುಜಾತ ಶಶಿಕಿರಣ, ಧನಲಕ್ಷ್ಮೀ ಮಾರೂರು, ಜಯಶ್ರೀ ಕೇಶವ್, ಸೌಮ್ಯ ಶೆಟ್ಟಿ, ಮುಖ್ಯಾಧಿಕಾರಿ ಶಿವಾ ನಾಯ್ಕ್, ಇಂಜಿನಿಯರ್ ನಳಿನ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!