ಜನ ಮನದ ನಾಡಿ ಮಿಡಿತ

Advertisement

ಯುರೋಪ್‌ನ ವಿವಿಧ ಭಾಗಗಳಲ್ಲಿ ಪ್ರದರ್ಶನಗೊಳ್ಳಲಿದೆ ಕರಾವಳಿಗರ ಗಂಡುಕಲೆ ಯಕ್ಷಗಾನ

ಮಂಗಳೂರು: ಯಕ್ಷಗಾನ ವಿಶ್ವಮಾನ್ಯತೆಯನ್ನು ಪಡೆಯಬೇಕೆಂಬುದು ನಮ್ಮೆಲ್ಲ ಕರಾವಳಿಗರ ಆಶಯ. ಭಾರತದ ಸಂಸ್ಕೃತಿ ಸಂಸ್ಕಾರವನ್ನು ಬಿಂಬಿಸುವಂತಹ ಕೇಂದ್ರ ಘಟ್ಟ ಎಂದರೆ ಅದು ಲಂಡನ್‌ನಲ್ಲಿರುವ ನೆಹರೂ ಸೆಂಟರ್‌ ಎಂದು ಪಟ್ಲ ಫೌಂಡೇಶನ್‌ನ ಸ್ಥಾಪಕಧ್ಯಕ್ಷ ಪಟ್ಲ ಸತೀಶ್‌ ಶೆಟ್ಟಿ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸೆಪ್ಟೆಂಬರ್ 9 ರಿಂದ 17ರವರೆಗೆ ಯುರೋಪ್ – ಯಕ್ಷಗಾನ ಅಭಿಯಾನ ನಡೆಯಲಿದೆ. ಈಗಾಗಲೇ ಬೇರೆ ಬೇರೆ ದೇಶಗಳಲ್ಲಿ ಯಕ್ಷಗಾನವನ್ನು ಪಸರಿಸುವ ಕಾರ್ಯ ಮಾಡಿದ್ದೇವೆ. ಯಕ್ಷಗಾನ ಅಭಿಯಾನದಲ್ಲಿ ತೆಂಕುತಿಟ್ಟಿನ ರಾಜ ವೇಷ, ಬಣ್ಣದ ವೇಷ, ಪಗಡಿ ವೇಷ, ಸ್ತ್ರೀ ವೇಷ, ಹಾಸ್ಯ ವೇಷಗಳು ರಾರಾಜಿಸಲಿದ್ದು, ಯುರೋಪ್ ದೇಶದ ಬೇರೆ ಬೇರೆ ಭಾಗಗಳಲ್ಲಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 9 ರಂದು ಜರ್ಮನಿಯ ಪ್ರಾಂಕ್ ಫುಟ್‌ 9, ಸೆ. 11 ರಂದು ಯುಕೆಯ ಮಿಲ್ಟನ್ ಕೇಯ್ನ್ಸ್‌, ಸೆ. 12 ರಂದು ಯುಕೆಯ ಬಾಸಿಲ್ಡನ್, ಸೆ.13 ರಂದು ಸೆಂಟ್ರಲ್ ಲಂಡನ್, ಯುಕೆ (ವಿಶ್ವ ಪ್ರಸಿದ್ಧ ನೆಹರೂ ಸೆಂಟರ್), 14 ರಂದು ಸ್ಲೋಗ್, ಸೆ.16 ರಂದು ಫ್ರಾನ್ಸ್ ನ ಪ್ಯಾರಿಸ್, ಸೆ.17 ರಂದು ಸ್ವಿಝರ್ ಲ್ಯಾಂಡ್ ನ ಝುರಿಚ್ ನಲ್ಲಿ ಯಕ್ಷಗಾನ ಭರ್ಜರಿ ಪದರ್ಶನಗೊಳ್ಳಲಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!