ಮಂಗಳೂರು: ಯಕ್ಷಗಾನ ವಿಶ್ವಮಾನ್ಯತೆಯನ್ನು ಪಡೆಯಬೇಕೆಂಬುದು ನಮ್ಮೆಲ್ಲ ಕರಾವಳಿಗರ ಆಶಯ. ಭಾರತದ ಸಂಸ್ಕೃತಿ ಸಂಸ್ಕಾರವನ್ನು ಬಿಂಬಿಸುವಂತಹ ಕೇಂದ್ರ ಘಟ್ಟ ಎಂದರೆ ಅದು ಲಂಡನ್ನಲ್ಲಿರುವ ನೆಹರೂ ಸೆಂಟರ್ ಎಂದು ಪಟ್ಲ ಫೌಂಡೇಶನ್ನ ಸ್ಥಾಪಕಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದ್ದಾರೆ.
ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸೆಪ್ಟೆಂಬರ್ 9 ರಿಂದ 17ರವರೆಗೆ ಯುರೋಪ್ – ಯಕ್ಷಗಾನ ಅಭಿಯಾನ ನಡೆಯಲಿದೆ. ಈಗಾಗಲೇ ಬೇರೆ ಬೇರೆ ದೇಶಗಳಲ್ಲಿ ಯಕ್ಷಗಾನವನ್ನು ಪಸರಿಸುವ ಕಾರ್ಯ ಮಾಡಿದ್ದೇವೆ. ಯಕ್ಷಗಾನ ಅಭಿಯಾನದಲ್ಲಿ ತೆಂಕುತಿಟ್ಟಿನ ರಾಜ ವೇಷ, ಬಣ್ಣದ ವೇಷ, ಪಗಡಿ ವೇಷ, ಸ್ತ್ರೀ ವೇಷ, ಹಾಸ್ಯ ವೇಷಗಳು ರಾರಾಜಿಸಲಿದ್ದು, ಯುರೋಪ್ ದೇಶದ ಬೇರೆ ಬೇರೆ ಭಾಗಗಳಲ್ಲಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 9 ರಂದು ಜರ್ಮನಿಯ ಪ್ರಾಂಕ್ ಫುಟ್ 9, ಸೆ. 11 ರಂದು ಯುಕೆಯ ಮಿಲ್ಟನ್ ಕೇಯ್ನ್ಸ್, ಸೆ. 12 ರಂದು ಯುಕೆಯ ಬಾಸಿಲ್ಡನ್, ಸೆ.13 ರಂದು ಸೆಂಟ್ರಲ್ ಲಂಡನ್, ಯುಕೆ (ವಿಶ್ವ ಪ್ರಸಿದ್ಧ ನೆಹರೂ ಸೆಂಟರ್), 14 ರಂದು ಸ್ಲೋಗ್, ಸೆ.16 ರಂದು ಫ್ರಾನ್ಸ್ ನ ಪ್ಯಾರಿಸ್, ಸೆ.17 ರಂದು ಸ್ವಿಝರ್ ಲ್ಯಾಂಡ್ ನ ಝುರಿಚ್ ನಲ್ಲಿ ಯಕ್ಷಗಾನ ಭರ್ಜರಿ ಪದರ್ಶನಗೊಳ್ಳಲಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…